Advertisement

Bangalore Rural ;ಮತ ಎಣಿಕೆ ದಿನ ಭದ್ರತೆ ಬಿಗಿ ಗೊಳಿಸಲು ಡಾ.ಮಂಜುನಾಥ್ ಪತ್ರ

06:19 PM Jun 02, 2024 | Team Udayavani |

ರಾಮನಗರ: ರಾಜ್ಯದಲ್ಲೇ ಭಾರೀ ಕುತೂಹಲ ಮೂಡಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಇದೆ ವೇಳೆ ಜೂನ್ 4ರಂದು ಮತ ಎಣಿಕೆ ನಡೆಯುವ ವೇಳೆ ಎಣಿಕಾ ಕೇಂದ್ರದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸುವಂತೆ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಚುನಾವಣ ಆಯೋಗಕ್ಕೆ ಮನವಿ ಮಾಡಿದ್ದಾರೆ.

Advertisement

ಮತ ಎಣಿಕೆಗೂ ಮುನ್ನವೇ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಪತ್ರ ಬರೆದಿದ್ದು, ಹೆಚ್ಚಿನ ಭದ್ರತೆ ಕಲ್ಪಿಸಲು ಮನವಿ ಮಾಡಿದ್ದು, ಎಣಿಕೆ ಕೇಂದ್ರದ ಸುತ್ತಲೂ ಹೆಚ್ಚುವರಿ ಪೊಲೀಸರು ಮತ್ತು ಅರೆಸೇನಾ ಪಡೆಗಳ ನಿಯೋಜನೆ ಮಾಡಲು ಮನವಿ ಮಾಡಿದ್ದಾರೆ.

ಯಾವುದೇ ಅನಧಿಕೃತ ವ್ಯಕ್ತಿ ಕೇಂದ್ರ ಪ್ರವೇಶವನ್ನು ತಡೆಗಟ್ಟಬೇಕು, ಪಕ್ಷದ ಏಜೆಂಟ್‌ಗಳು ಸೇರಿ ಎಣಿಕಾ ಕೇಂದ್ರ ಪ್ರವೇಶಿಸುವ ಎಲ್ಲರನ್ನೂ ಸಂಪೂರ್ಣವಾಗಿ ತಪಾಸಣೆ ಮಾಡಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲು ಒತ್ತಾಯಿಸಿ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಹಾಲಿ ಸಂಸದ ಡಿ.ಕೆ.ಸುರೇಶ್ ಅವರ ಎದುರು ಡಾ. ಮಂಜುನಾಥ್ ಅವರು ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿದ್ದು ಜಿದ್ದಾಜಿದ್ದಿನ ಸ್ಫರ್ಧೆ ನಡೆದಿದೆ ಎಂದು ಲೆಕ್ಕಾಚಾರ ಹಾಕಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next