Advertisement

ಜೂ. 11, 12: ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ

12:03 AM Jun 10, 2022 | Team Udayavani |

ಮಂಗಳೂರು : ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ್‌ 2 ದಿನಗಳ ಕಾಸರಗೋಡು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

Advertisement

ಜೂ. 11ರಂದು ಬೆಳಗ್ಗೆ 8ಕ್ಕೆ ಬಜಪೆಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಕಾಸರಗೋಡಿಗೆ ತೆರಳುವರು. 11 ಗಂಟೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕಾಸರಗೋಡಿನ ಕೋಟೆಕಣಿಯ ರಾಮನಗರದ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿಯ ಸಹಯೋಗದಲ್ಲಿ ಪೆರ್ಲದಲ್ಲಿ ನಡೆಯುವ ಗಡಿನಾಡು ಸಾಂಸ್ಕೃತಿಕ ಉತ್ಸವ, ಸಂಜೆ 4ಕ್ಕೆ ಕಾಸರಗೋಡಿನ ಜಿ.ಪಂ. ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳೊಂದಿಗೆ ಡಾ| ಕಯ್ನಾರ ಕಿಂಞಣ್ಣ ರೈ ಅವರ ಹೆಸರಿನ ಸಾಂಸ್ಕೃತಿಕ ಭವನ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ, 5 ಗಂಟೆಗೆ ಕಯ್ನಾರರ ನಿವಾಸಕ್ಕೆ ಭೇಟಿ, ರಾತ್ರಿ ಕಾಸರಗೋಡಿನಲ್ಲಿ ವಾಸ್ತವ್ಯ ಹೂಡುವರು.

ಜೂ. 12ರಂದು ಬೆಳಗ್ಗೆ 10ಕ್ಕೆ ಕೊಂಡೆವೂರು ನಿತ್ಯಾನಂದ ಆಶ್ರಮದ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಉಪ್ಪಳ ಗಡಿ ಉತ್ಸವದಲ್ಲಿ ಭಾಗಹಿಸುವರು. ಮಧ್ಯಾಹ್ನ 1 ಗಂಟೆಗೆ ಕಾಸರಗೋಡಿನ ವಿವಿಧ ಕನ್ನಡ ಸಂಘ-ಸಂಸ್ಥೆಗಳಿಗೆ ಭೇಟಿ, ಸಂಜೆ 4ಕ್ಕೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ಕಾಸರಗೋಡಿನ ಪೆರ್ಲದಲ್ಲಿ ನಿರ್ಮಿಸಿದ ನಾಲಂದ ವಿಶ್ವವಿದ್ಯಾಲಯದ ನೂತನ ಕಟ್ಟಡ ಹಾಗೂ ನಿಟ್ಟೆ ವಿಶ್ವವಿದ್ಯಾನಿಲಯದ ಪ್ರಾಯೋಗಿಕ ಸ್ಮಾರ್ಟ್‌ಕ್ಲಾಸ್‌ ಉದ್ಘಾಟನೆಯಲ್ಲಿ ಸಮಾರಂಭದಲ್ಲಿ ಭಾಗವಹಿಸುವರು.

Advertisement

Udayavani is now on Telegram. Click here to join our channel and stay updated with the latest news.

Next