Advertisement

Dr.ಪ್ರಭಾಕರ ಭಟ್‌ ವಿರುದ್ಧ ಪ್ರಕರಣ: ನಳಿನ್‌ ಖಂಡನೆ

11:30 PM Dec 27, 2023 | Team Udayavani |

ಮಂಗಳೂರು: ಡಾ| ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದುರುದ್ದೇಶವಾಗಿ ಪ್ರಕರಣ ದಾಖಲಿ ಸಿರುವುದು ಖಂಡನೀಯ. ಕಾಂಗ್ರೆಸ್‌ ಸರಕಾರದ ಹಿಂದೂ ವಿರೋಧಿ ನೀತಿ ಮುಂದುವರಿದಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ.

Advertisement

ಮುಸ್ಲಿಂ ಸಮಾಜದ ಮಹಿಳೆಯರಿಗೆ ಆದ ಅನ್ಯಾಯ ಹಾಗೂ ಮೋದಿ ಸರಕಾರ ತ್ರಿವಳಿ ತಲಾಖ್‌ ನಿಷೇಧ ಮಾಡಿದ ಬಗ್ಗೆ ಡಾ| ಭಟ್‌ ಭಾಷಣದಲ್ಲಿ ಉಲ್ಲೇಖಿಸಿದ್ದರು. ಇದೇ ಹೇಳಿಕೆಯನ್ನು ತಿರುಚಿ ಅಲ್ಪಸಂಖ್ಯಾಕರನ್ನು ಓಲೈಸುವ ಉದ್ದೇಶದಿಂದ ಪ್ರಕರಣ ದಾಖಲಿ ಸಲಾಗಿದೆ.

ಸಿದ್ದರಾಮಯ್ಯ ಸರಕಾರದ ಈ ಷಡ್ಯಂತ್ರವನ್ನು ಸಹಿಸಲು ಸಾಧ್ಯವಿಲ್ಲ. ಡಾ| ಪ್ರಭಾಕರ ಭಟ್‌ ವಿರುದ್ಧ ಹಾಕಿರುವ ಸುಳ್ಳು ಪ್ರಕರಣವನ್ನು ತತ್‌ಕ್ಷಣ ಹಿಂಪಡೆಯಬೇಕು ಎಂದು ಅವರು ಪ್ರಕಟನೆಯ ಮೂಲಕ ಆಗ್ರಹಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next