Advertisement

ಡಾ.ಎಡಪಡಿತ್ತಾಯ ಮಂಗಳೂರು ವಿವಿ ಕುಲಪತಿ

11:06 PM Jun 03, 2019 | Lakshmi GovindaRaj |

ಬೆಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅವರನ್ನು ಆಯ್ಕೆ ಮಾಡಿ ರಾಜ್ಯಪಾಲರು ಸೋಮವಾರ ಆದೇಶ ಹೊರಡಿಸಿದ್ದಾರೆ.

Advertisement

ಕುಲಪತಿಯಾಗಿದ್ದ ಪ್ರೊ.ಕೆ.ಬೈರಪ್ಪ ಅವರ ಅವಧಿ ಮುಗಿದ ನಂತರ ಕುಲಪತಿ ಹುದ್ದೆ ಖಾಲಿಯಾಗಿತ್ತು. ಕಾಯಂ ಕುಲಪತಿ ನೇಮಿಸುವ ಸಂಬಂಧ ಸರ್ಕಾರ ಶೋಧನಾ ಸಮಿತಿ ರಚನೆ ಮಾಡಿತ್ತು. ಶೋಧನಾ ಸಮಿತಿಯ ಶಿಫಾರಸಿನಂತೆ ಸರ್ಕಾರ ಎರಡು ಹೆಸರನ್ನು ರಾಜ್ಯಪಾಲರಿಗೆ ಸಲ್ಲಿಸಿತ್ತು. ರಾಜ್ಯಪಾಲರು ಸೋಮವಾರ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅವರ ಹೆಸರನ್ನು ಅಂತಿಮ ಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮುಂದಿನ ನಾಲ್ಕು ವರ್ಷ ಇವರ ಅಧಿಕಾರಾವಧಿ ಇರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಶೋಧನಾ ಸಮಿತಿ ವರದಿ ಸಲ್ಲಿಸಿದ್ದು, ಆಯ್ಕೆ ಪ್ರಕ್ರಿಯೆ ಕೂಡ ಪೂರ್ಣಗೊಂಡಿತ್ತು. ಆದರೆ, ರಾಜ್ಯಪಾಲರು ಅಧಿಕೃತ ಆದೇಶ ಹೊರಡಿಸದೇ ಇರುವುದರಿಂದ ಅಧಿಕಾರ ಹಸ್ತಾಂತರ ಆಗಿರಲಿಲ್ಲ. ಸೋಮವಾರ ರಾಜ್ಯಪಾಲರು ಅಧಿಕೃತ ಆದೇಶ ಹೊರಡಿಸಿದ್ದರಿಂದ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಮಂಗಳೂರು ವಿವಿ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡರು.

2018ರ ಜೂನ್‌ 4ರಂದು ಪ್ರೊ.ಕೆ.ಬೈರಪ್ಪ ಅವರ ಕುಲಪತಿ ಅವಧಿ ಪೂರ್ಣಗೊಂಡಿತ್ತು. ನಂತರ ವಿವಿಯ ದೈಹಿಕ ಶಿಕ್ಷಣ ವಿಭಾಗದ ಡಾ.ಸಿ.ಕೆ.ಕಿಶೋರ್‌ ಕುಮಾರ್‌, ನಂತರ ವಾಣಿಜ್ಯ ವಿಭಾಗದ ಪ್ರೊ.ಪಿ.ಐಶ್ವರ ಹಾಗೂ ಪ್ರೊ.ಕೆ.ಕಿಶೋರಿ ನಾಯಕ್‌ ಹಂಗಾಮಿ ಕುಲಪತಿಯಾಗಿ ಸೇವೆ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next