Advertisement

ಕಲ್ಲೇಟು ಬಿದ್ದ ಡಾ.ಜಿ.ಪರಮೇಶ್ವರ್‌ ಬೈರೇನಹಳ್ಳಿಯಿಂದಲೇ ಪ್ರಚಾರ

09:41 PM Apr 30, 2023 | Team Udayavani |

ಕೊರಟಗೆರೆ: “ಯಾರು ಏನೇ ಹುನ್ನಾರ ನಡೆಸಿದ್ರೂ, ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತೆ ಗೆಲುವು ಸಾಧಿಸುತ್ತೆ. ನಾನು ನಾಟಕ ಮಾಡುವ ನಾಯಕ ಅಲ್ಲ, ಅದರ ಅವಶ್ಯಕತೆಯೂ ನನಗಿಲ್ಲ. ನಿಮ್ಮೆಲ್ಲರ ಆಶೀರ್ವಾದ ಸದಾ ನನ್ನನ್ನು ರಕ್ಷಣೆ ಮಾಡುತ್ತದೆ” ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಪಂ ವ್ಯಾಪ್ತಿಯ ಬೈರೇನಹಳ್ಳಿ ಗ್ರಾಮದಿಂದಲೇ ಭಾನುವಾರ ಮತ್ತೆ ಚುನಾವಣಾ ಪ್ರಚಾರ ಪ್ರಾರಂಭ ಮಾಡಿದ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಸೋಲುವ ಆತಂಕ ಇರುವುದು ವಿರೋಧ ಪಕ್ಷದವರಿಗೆ ಮಾತ್ರ. ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಶಾಂತಿ ಕದಡಬಾರದು. ಕಿಡಿಗೇಡಿಗಳು ಶಾಂತಿ ಕದಡುವ ಹುನ್ನಾರ ನಡೆಸಿದರೆ, ನೀವು ಮತ ಹಾಕುವ ಮೂಲಕ ಅವರಿಗೆ ತಕ್ಕಪಾಠ ಕಲಿಸಬೇಕಿದೆ ಎಂದು ಮನವಿ ಮಾಡಿದರು. ಬೈರೇನಹಳ್ಳಿ ಗೇಟ್‌ ಬಳಿ ಡಾ.ಜಿ.ಪರಮೇಶ್ವರ್‌ ಶುಕ್ರವಾರ ಸಂಜೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವೇಳೆ ಹೂವು ಜೊತೆಗೆ ಕಲ್ಲು ತೂರಿ ಬಂದು ತಲೆಗೆ ಬಡಿದಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next