Advertisement

ಗೋಹತ್ಯೆ ನಿಷೇಧ ಕುರಿತು ಇನ್ನಷ್ಟು ಚರ್ಚೆ ಅಗತ್ಯ: ಸಚಿವ ಡಾ.ಕೆ.ಸುಧಾಕರ್

06:03 PM Nov 06, 2020 | sudhir |

ಬೆಂಗಳೂರು: ದೇಶದಲ್ಲಿ ಗೋವು ಪವಿತ್ರ ಎಂದು ಪರಿಗಣನೆಯಾಗಿದ್ದು, ಗೋಹತ್ಯೆಯಿಂದ ಪಾರಂಪರಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಗೋಹತ್ಯೆ ನಿಷೇಧ ಕಾನೂನು ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಇನ್ನಷ್ಟು ಚರ್ಚೆಯಾಗಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಗೋವು ಒಂದು ಪವಿತ್ರವಾದ ಪ್ರಾಣಿ ಎಂದು ನಂಬುವ ದೇಶ ನಮ್ಮದು. ಗೋವನ್ನು ಕುಟುಂಬದ ಸದಸ್ಯರಂತೆ ನಾವು ಗೌರವಿಸುತ್ತೇವೆ. ಗೋಹತ್ಯೆ ಹಿಂದೂಗಳ ಸಂಪ್ರದಾಯಕ್ಕೆ ವಿರುದ್ಧವಾದ ಕ್ರಮವಾಗಿದೆ. ಆದ್ದರಿಂದ ಗೋಹತ್ಯೆಗೆ ಅವಕಾಶ ನೀಡುವುದು ಸರಿಯಲ್ಲ. ದೇಶದಲ್ಲಿ ಗೋಹತ್ಯೆ ನಿಷೇಧ ಕ್ರಮ ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಇನ್ನಷ್ಟು ಚರ್ಚೆಯಾಗುವ ಅಗತ್ಯವಿದೆ” ಎಂದರು.

ಇದನ್ನೂ ಓದಿ:ಸಿಗಂದೂರು ದೇವಸ್ಥಾನಕ್ಕೆ ರಚಿಸಿದ ಸಮಿತಿ ಹಿಂದೆ ಹಿಂದುತ್ವವಾದಿಗಳ ಕೈವಾಡ: ಬಿ.ಕೆ.ಹರಿಪ್ರಸಾದ್

“ಆರೋಗ್ಯ ಇಲಾಖೆಯಡಿ ತಾಂತ್ರಿಕ ಸಲಹಾ ಸಮಿತಿಯ ವರದಿಯ ಶಿಫಾರಸ್ಸಿನಂತೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಟಾಕಿ ನಿಷೇಧ ಕ್ರಮ ಕೈಗೊಂಡಿದ್ದಾರೆ. ಈ ಕ್ರಮವನ್ನು ಪಾಲಿಸುವ ಮೂಲಕ ಸರಳವಾಗಿ ಹಬ್ಬ ಆಚರಿಸಿ” ಎಂದು ಸಚಿವರು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next