Advertisement

ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿ ಪ್ರಕಟ

12:43 AM Apr 18, 2019 | Lakshmi GovindaRaju |

ಬೆಂಗಳೂರು: ಅಂತಾರಾಷ್ಟ್ರೀಯ ಬಸವ ಪ್ರತಿಷ್ಠಾನದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿಗೆ ವಿಮರ್ಶಕಿ ಡಾ.ಎಂ.ಎಸ್‌.ಆಶಾದೇವಿ ಆಯ್ಕೆಯಾಗಿದ್ದಾರೆ.

Advertisement

ಏ.27ರಂದು ಜಯನಗರದ 8ನೇ ಬಡಾವಣೆಯಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ಚಿಂತನ ಮಂಟಪದಲ್ಲಿ ಸಂಜೆ 6ಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25 ಸಾವಿರ ರೂ. ನಗದು ಮತ್ತು ಕಂಚಿಕ ಫ‌ಲಕವನ್ನೊಳಗೊಂಡಿರುತ್ತದೆ.

ಚಿತ್ರದುರ್ಗದ ಮುರುಘಾ ರಾಜೇಂದ್ರ ಮಠದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಕೆ.ಮರುಳಸಿದ್ದಪ್ಪ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next