Advertisement

ವ್ಯಸನ ಮುಕ್ತ ಸಮಾಜಕ್ಕೆ ಪಣ ತೊಟ್ಟಿದ್ದ ಡಾ.ಮಹಾಂತ ಶ್ರೀ ಲಿಂಗೈಕ್ಯ

11:06 AM May 19, 2018 | Team Udayavani |

ಬಾಗಲಕೋಟೆ: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ  ಇಳಕಲ್ ಚಿತ್ತರಗಿ ವಿಜಯಮಹಾಂತೇಶ್ವರ ಸಂಸ್ಥಾನ ಮಠದ 19 ನೇ ಪೀಠಾಧ್ಯಕ್ಷರಾಗಿದ್ದ ಡಾ.ಮಹಾಂತ ಶಿವಯೋಗಿಗಳು (89) ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ. 

Advertisement

ವ್ಯಸನಮುಕ್ತ ಸಮಾಜ ನಿರ್ಮಾಣದ ಹರಿಕಾರರು ಎಂದೇ ಕರೆಸಿಕೊಳ್ಳುತ್ತಿದ್ದ ಅವರು, ಪ್ರತಿ ಗ್ರಾಮ, ನಗರಗಳಲ್ಲಿ ಪಾದಯಾತ್ರೆ ನಡೆಸಿ, ಜನರ ವ್ಯಸನಗಳನ್ನು ತಮ್ಮ ಜೋಳಿಗೆಯಲ್ಲಿ ಹಾಕಿಕೊಂಡು ಚಟಗಳನ್ನು ಬಿಡುವಂತೆ ಬೋಧನೆ ಮಾಡಿದ್ದರು.  ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿದ್ದ ಶ್ರೀಗಳ  ಸಾಮಾಜಿಕ ಸೇವೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. 

ಶ್ರೀಗಳ ಜನ್ಮ ದಿನವಾಗಿರುವ ಅಗಸ್ಟ್‌1 ನ್ನು  ಕಳೆದ ವರ್ಷ ಸರ್ಕಾರ ವ್ಯಸನಮುಕ್ಯ ದಿನಾಚರಣೆಯನ್ನಾಗಿ ಘೋಷಣೆ ಮಾಡಿತ್ತು.

ಶ್ರೀಗಳ ಪಾರ್ಥೀವ ಶರೀರವನ್ನು ಶನಿವಾರ ರಾತ್ರಿ ಇಳಕಲ್ಲಿನಲ್ಲಿರುವ ಶ್ರೀ ಮಠಕ್ಕೆ ತರಲಾಗುತ್ತಿದ್ದು, ಭಾನುವಾರ ಭಕ್ತರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸೋಮವಾರ ಬೆಳಗ್ಗೆ  ಅಂತಿಮ ವಿಧಿ ವಿಧಾನಗಳು ನಡೆಯಲಿದೆ. 

ಶ್ರೀಗಳ ನಿಧನಕ್ಕೆ ಅಪಾರ ಭಕ್ತರು ತೀವ್ರ ಸಂತಾಪ ಸೂಚಿಸಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next