Advertisement

ಡಾ.ಮೋಹನ ಆಳ್ವಾಗೆ ಸಿದ್ದಶ್ರೀ ಪ್ರಶಸ್ತಿ ಪ್ರದಾನ

07:55 AM Jan 19, 2018 | Team Udayavani |

ಅಮೀನಗಡ: ಇಂದಿನ ಆಧುನಿಕ ಜಗತ್ತಿನಲ್ಲಿ ಎಲ್ಲ ಸೌಕರ್ಯಗಳನ್ನು ಸುಲಭವಾಗಿ ಪಡೆಯಬಹುದು. ಆದರೆ,
ಒಳ್ಳೆಯ ಸಂಸ್ಕಾರ ಸಿಗುವುದು ಗುರುಕುಲಗಳಲ್ಲಿ ಮಾತ್ರ ಎಂದು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ ಆಳ್ವಾ ಹೇಳಿದರು. 

Advertisement

ಬಾಗಲಕೋಟೆ ಜಿಲ್ಲೆಯ ಸುಕ್ಷೇತ್ರ ಸಿದ್ದನಕೊಳ್ಳದಲ್ಲಿ ಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಗುರುವಾರ ನಡೆದ ಚಲನಚಿತ್ರೋತ್ಸವ ಹಾಗೂ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಸಿದ್ದಶ್ರೀ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. 

ಸಮಾಜಕ್ಕೆ ಸೂಕ್ತ ಮಾರ್ಗದರ್ಶನ ನೀಡಿ ಉತ್ತಮ ಸಮಾಜ ನಿರ್ಮಾಣಕ್ಕೆ ಗುರುಗಳು ಮಾರ್ಗದರ್ಶನ ನೀಡಬೇಕು. ಇದರಿಂದ
ಸಾಮಾಜಿಕ ಬದಲಾವಣೆ ಸಾಧ್ಯ ಎಂದರು. ಇದೇ ವೇಳೆ, ಡಾ.ಮೋಹನ ಆಳ್ವಾ ಅವರಿಗೆ ಮಠದಿಂದ ಸಿದ್ದಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ 25000 ರೂ.ನಗದು ಹಾಗೂ ಪ್ರಮಾಣ ಪತ್ರವನ್ನು ಹೊಂದಿದೆ.

ಅಂಕಲಿಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಸಿದ್ದನಕೊಳ್ಳದ ಮೃತ್ಯುಂಜಯ ಸ್ವಾಮೀಜಿ, ಡಾ. ಶಿವಕುಮಾರ ಸ್ವಾಮೀಜಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next