Advertisement

ಅಮಾಸೆಬೈಲಿಗೆ ಇಸಿಜಿ ಯಂತ್ರ ಕೊಡುಗೆಯ ಭರವಸೆ ನೀಡಿದ ಹೃದ್ರೋಗ ತಜ್ಞ ಡಾ|ಪದ್ಮನಾಭ ಕಾಮತ್

01:41 AM Apr 21, 2021 | Team Udayavani |

ಕುಂದಾಪುರ : ಸಾರ್ವಜನಿಕ ಆಸ್ಪತ್ರೆಯಿಲ್ಲದೆ ತುರ್ತು ಚಿಕಿತ್ಸೆಗಾಗಿ ಹತ್ತಾರು ಕಿ.ಮೀ. ದೂರ ಸಂಚರಿಸ ಬೇಕಾದ ಅನಿವಾರ್ಯತೆಯಿರುವ ಅಮಾಸೆಬೈಲಿನ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಹೃದ್ರೋಗ ವೈದ್ಯರೊಬ್ಬರು ಇಸಿಜಿ ಯಂತ್ರವನ್ನು ಕೊಡುಗೆಯಾಗಿ ನೀಡಲು ಮುಂದಾಗಿದ್ದಾರೆ.

Advertisement

ಅಮಾಸೆಬೈಲಿನಲ್ಲಿ ಆಸ್ಪತ್ರೆಯಿಲ್ಲದೆ ಜನ ಅನುಭವಿಸುತ್ತಿರುವ ಸಂಕಷ್ಟದ ಕುರಿತಂತೆ ಉದಯವಾಣಿಯಲ್ಲಿ ಎ. 20ರಂದು ಪ್ರಕಟಗೊಂಡ ವರದಿಗೆ ಸ್ಪಂದಿಸಿದ ಕೆಎಂಸಿ ಮಂಗಳೂರಿನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ| ಪದ್ಮನಾಭ ಕಾಮತ್‌ “ಕಾರ್ಡಿಯೋಲಜಿ ಆಟ್‌ ಡೋರ್‌ ಸ್ಟೆಪ್‌ ಫೌಂಡೇಶನ್‌’ ಮೂಲಕವಾಗಿ ಅಲ್ಲಿಗೆ ಇಸಿಜಿ ಯಂತ್ರ ನೀಡುವುದಾಗಿ ತಿಳಿಸಿದ್ದಾರೆ.

ಈ ಕುರಿತಂತೆ “ಉದಯವಾಣಿ’ ಜತೆ ಮಾತನಾಡಿದ ಕುಂದಾಪುರ ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಅವರು, “ಉದಯವಾಣಿ’ ಯಲ್ಲಿ ಪ್ರಕಟಗೊಂಡ ವರದಿಯನ್ನು ನೋಡಿ ಡಾ| ಪದ್ಮನಾಭ ಕಾಮತ್‌ ಕರೆ ಮಾಡಿ, ಅಲ್ಲಿಗೆ ಇಸಿಜಿ ಯಂತ್ರ ಕೊಡುವುದಾಗಿ ತಿಳಿಸಿದ್ದಾರೆ. ಅದನ್ನು ಸದ್ಯ ಅಮಾಸೆಬೈಲಿನಲ್ಲಿರುವ ಆಯುಷ್‌ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿಟ್ಟು, ಒಬ್ಬರಿಗೆ ತರಬೇತಿ ನೀಡಿ, ಅದರ ಬಗ್ಗೆ ತಿಳಿಸಿಕೊಟ್ಟು, ಜನರಿಗೆ ನೆರವಾಗುವಂತೆ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.

ಉದಯವಾಣಿ ವರದಿ: ಅಮಾಸೆಬೈಲಿನ ಕೆಳಸುಂಕ, ಕೆಲಾ, ಶ್ಯಾಮೆಹಕ್ಲು, ತೊಂಬಟ್ಟು, ನಡಂಬೂರು ಮತ್ತಿತರ ಭಾಗದ ಜನರು ತುರ್ತು ಚಿಕಿತ್ಸೆಗಾಗಿ 20-25 ಕಿ.ಮೀ. ದೂರ ಸಂಚರಿಸಬೇಕಾಗಿದ್ದು, ಈ ಬಗ್ಗೆ “ಉದಯವಾಣಿ’ ಎ. 20 ರಂದು ವಿಶೇಷ ವರದಿ ಪ್ರಕಟಿಸಿ ಗಮನಸೆಳೆದಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next