Advertisement

ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಡಾ|ಹೆಗ್ಗಡೆ 

01:50 PM Feb 15, 2018 | Team Udayavani |

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಬುಧವಾರ ಸಂಜೆ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಸುಮಾರು 15 ನಿಮಿಷ ಕಾಲ ಉಭಯರೂ ಮಾತನಾಡಿದರು. ಶಿವರಾತ್ರಿ ನಿಮಿತ್ತ ಧರ್ಮಸ್ಥಳ ಕ್ಷೇತ್ರದಲ್ಲಿ ನಡೆಸಿದ ವಿಶೇಷ ಪೂಜೆಯ ಪ್ರಸಾದವನ್ನು ಡಾ| ಹೆಗ್ಗಡೆಯವರು ಪೇಜಾವರ ಶ್ರೀಗಳಿಗೆ ಕೊಟ್ಟು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

Advertisement

ಪೇಜಾವರ ಮಠದ ಹೊರಭಾಗ ವಿಜಯಧ್ವಜ ಛತ್ರದ ತಳಅಂತಸ್ತಿನಲ್ಲಿ ಶ್ರೀಗಳು ವಿಶ್ರಾಂತಿ ಪಡೆಯುತ್ತಿದ್ದಾರೆ. ಪಂಚಮ ಪರ್ಯಾಯವನ್ನು ಯಶಸ್ವಿಯಾಗಿ ಮುಗಿಸಿದ ಬಳಿಕ ಮಂತ್ರಾಲಯಕ್ಕೆ ಭೇಟಿ ನೀಡಿದ ವೇಳೆ ಮೈಕೈ ನೋವಿಗೆ ಒಳಗಾಗಿದ್ದ ಶ್ರೀಗಳು ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಉಡುಪಿಗೆ ಮರಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next