Advertisement

ಡಾ.ಪಾಟೀಲಗೆ ಕುಂಚ ಕಲಾ ತಪಸ್ವಿ ರಾಷ್ಟ್ರೀಯ ಪ್ರಶಸ್ತಿ

06:20 AM Nov 24, 2018 | |

ಧಾರವಾಡ: ಚಿತ್ರಕಲಾ ಶಿಲ್ಪಿ ಡಿ.ವಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನಿಂದ ಕೊಡ ಮಾಡುವ ಒಂದು ಲಕ್ಷ ರೂ. ನಗದು, ಸ್ಮರಣಿಕೆ ಒಳಗೊಂಡಿರುವ ಜೀವಮಾನ ಸಾಧನೆಯ ಕುಂಚ ಕಲಾ ತಪಸ್ವಿ ರಾಷ್ಟ್ರೀಯ ಪ್ರಶಸ್ತಿಗೆ ಕಲಬುರಗಿಯ ಡಾ.ಎ.ಎಸ್‌. ಪಾಟೀಲ ಭಾಜನರಾಗಿದ್ದಾರೆ.

Advertisement

ಇದಲ್ಲದೇ 50 ಸಾವಿರ ನಗದು,ಸ್ಮರಣಿಕೆ ಒಳಗೊಂಡ ಕುಂಚ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಬೆಂಗಳೂರಿಗೆ ಸುರೇಖಾ ಹಾಗೂ
ತಲಾ 25 ಸಾವಿರ ನಗದು, ಸ್ಮರಣಿಕೆ ಒಳಗೊಂಡ ಯುವ ಕುಂಚ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಓಡಿಶಾದ ಸಂತೋಷಕುಮಾರ ರೌತರಾಯ್‌ ಮತ್ತು ಪರಾಗ ದಿನೇಶ ಬೋರ್ಸೆ ಅವರನ್ನು ಆಯ್ಕೆ ಮಾಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆಗೊಳಿಸಿದ ಟ್ರಸ್ಟ್‌ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ನಗರದ ಸೃಜನಾ ರಂಗಮಂದಿರದಲ್ಲಿ ನ.29 ರಂದು ಸಂಜೆ 5.30 ಗಂಟೆಗೆ ಜರುಗುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next