Advertisement

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

01:19 AM May 09, 2024 | Team Udayavani |

ಮಂಗಳೂರು: ಮಂಗಳೂರು ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿಯು (ಎನ್‌ಬಿಇಎಂಎಸ್‌) ಪ್ರಸಿಡೆಂಟ್ಸ್‌ ಅವಾರ್ಡ್‌ ಆಫ್ ಮೆರಿಟ್‌ ಘೋಷಿಸಿದೆ.

Advertisement

ಮೇ 10ರಂದು ಅಪರಾಹ್ನ ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯುವ ಮಂಡಳಿಯ 22ನೇ ಘಟಿಕೋತ್ಸವದಲ್ಲಿ ಪ್ರಶಸ್ತಿಯನ್ನು ದಿ| ಲಕ್ಷ್ಮಣ ಪ್ರಭು ಅವರ ಪತ್ನಿ ಕವಿತಾ ಪ್ರಭು ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಲಿದ್ದಾರೆ.

ಡಾ| ಪ್ರಭು ಅವರು ಕೆಎಂಸಿಯ ಮೂತ್ರಾಂಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಹಲವು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದರು. ಯುರಾಲಜಿಕಲ್‌ ಸೊಸೈಟಿ ಆಫ್ ಇಂಡಿಯಾದ ಕಾರ್ಯದರ್ಶಿಯಾಗಿದ್ದ ಡಾ| ಪ್ರಭು ಅವರು ದೇಶ ವಿದೇಶಗಳಲ್ಲಿ ಹಲವು ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಿ ವೈಜ್ಞಾನಿಕ ಪ್ರಬಂಧಗಳನ್ನು ಮಂಡಿಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next