Advertisement

ಡಾ|ಅಂಬೇಡ್ಕರ್‌ ತತ್ವಗಳ ಅನುಷ್ಠಾನಕ್ಕೆ ಪ್ರಧಾನಿ ಮುಂದಡಿ

03:23 PM Apr 15, 2017 | Team Udayavani |

ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಅವರ 126ನೇ ಜಯಂತಿ ಅಂಗವಾಗಿ ಬಿಜೆಪಿ ಹು-ಧಾ ಮಹಾನಗರ ಜಿಲ್ಲಾ ಹಾಗೂ ಪೂರ್ವ ವಿಧಾನಸಭಾ ಕ್ಷೇತ್ರದ ಎಸ್‌ಸಿ ಮೋರ್ಚಾ ವತಿಯಿಂದ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ| ಅಂಬೇಡ್ಕರ್‌ ಭಾವಚಿತ್ರದ ಮೆರವಣಿಗೆಗೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ ಚಾಲನೆ ನೀಡಿದರು. 

Advertisement

ಇಲ್ಲಿನ ದುರ್ಗದ ಬಯಲಿನಿಂದ ಆರಂಭಗೊಂಡ ಮೆರವಣಿಗೆ ಪ್ರಧಾನ ಅಂಚೆ ಕಚೇರಿ ಎದುರಿನ ಡಾ| ಅಂಬೇಡ್ಕರ್‌ ವೃತ್ತ ವರೆಗೆ ನಡೆಯಿತು. ಜಗದೀಶ ಶೆಟ್ಟರ ಸೇರಿದಂತೆ ಬಿಜೆಪಿ ಧುರೀಣರು ಅಂಬೇಡ್ಕರ್‌ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶೆಟ್ಟರ, ಸಮಾಜದಲ್ಲಿರುವ ಅಸಮಾನತೆ ಹೋಗಲಾಡಿಸಲು ಅಂಬೇಡ್ಕರ್‌ ಹೋರಾಟ ನಡೆಸಿದರು.

ಪ್ರಧಾನಿ ಮೋದಿ ಅಂಬೇಡ್ಕರ್‌ ಅವರ ಪಂಚಕ್ಷೇತ್ರಗಳ ಅಭಿವೃದ್ಧಿಗೆ ಹಾಗೂ ಅವರ ತತ್ವಗಳ ಅನುಷ್ಠಾನಕ್ಕೆ ಮುಂದಾಗಿದ್ದಾರೆ ಎಂದರು. ಪಕ್ಷದ ರಾಜ್ಯ ಉಪಾಧ್ಯಕ್ಷ ಮಾ. ನಾಗರಾಜ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಮಾತನಾಡಿದರು. ಮಹಾಪೌರ ಡಿ.ಕೆ. ಚವ್ಹಾಣ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಲಕ್ಷ್ಮಣ ಬೀಳಗಿ, ಲಕ್ಷ್ಮೀ ಉಪ್ಪಾರ, 

ಸ್ಮಿತಾ ಜಾಧವ, ಶಿವು ಮೆಣಸಿನಕಾಯಿ, ಶಿವಾನಂದ ಮುತ್ತಣ್ಣವರ, ಶಂಕರಪ್ಪ ಬಿಜವಾಡ, ವೆಂಕಟೇಶ ಮೇಸ್ತ್ರಿ, ತಿಪ್ಪಣ್ಣ ಮಜ್ಜಗಿ, ಜಯತೀರ್ಥ ಕಟ್ಟಿ, ರಂಗನಾಯಕ ತಪೇಲಾ, ವೆಂಕಟೇಶ ಕುಲಕರ್ಣಿ, ಚಂದ್ರಶೇಖರ ಗೋಕಾಕ, ಬಸವರಾಜ ಅಮ್ಮಿನಭಾವಿ, ಹನುಮಂತ  ಚಲವಾದಿ, ದತ್ತಮೂರ್ತಿ ಕುಲಕರ್ಣಿ, ಶಶಿ ಬಿಜವಾಡ, ಲಕ್ಷ್ಮಣ ಕಲಾಲ ಮೊದಲಾದವರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next