Advertisement

ಸಿಎಂ ಬೊಮ್ಮಾಯಿ ಭೇಟಿಯಾದ ಡಾ.ರಾಜ್‌ ಕುಮಾರ್‌ ಕುಟುಂಬ ಸದಸ್ಯರು

12:00 PM Aug 17, 2022 | |

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬುಧವಾರ ಡಾ.ರಾಜ್‌ ಕುಮಾರ್‌ ಕುಟುಂಬ ಸದಸ್ಯರು ಭೇಟಿಯಾಗಿ ಮಾತುಕತೆ ನಡೆಸಿದರು.

Advertisement

ರೇಸ್ ಕೋರ್ಸ್ ನಿವಾಸದಲ್ಲಿ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನಿತ್ ರಾಜಕುಮಾರ ಮತ್ತು ಧಿರೇನ್ ರಾಮ್‌ ಕುಮಾರ್ ಸಿಎಂ ಭೇಟಿಯಾಗಿ ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಕುಮಾರ್ ಸಮಾಧಿ ,ಪುನೀತ್ ಸಮಾಧಿ ಮತ್ತು ಪಾರ್ವತಮ್ಮ ಸಮಾಧಿ ಸ್ಥಳವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿದರು. ಒಂದೇ ಸ್ಥಳದಲ್ಲಿ ಮೂರು ಜನರ ಸಮಾಧಿ ಇದೆ ಇದರ ಅಭಿವೃದ್ಧಿ ವಿಚಾರವಾಗಿ ಸಿಎಂ ಜೊತೆ ಚರ್ಚೆ ನಡೆಸಿದರು.

ಇದನ್ನೂ ಓದಿ: ಸಾವರ್ಕರ್ ಫ್ಲೆಕ್ಸ್ ವಿವಾದ : ಉಡುಪಿಯಲ್ಲಿ ಬಿಜೆಪಿ ಮುಖಂಡರಿಂದ ಫ್ಲೆಕ್ಸ್ ಗೆ ಮಾಲಾರ್ಪಣೆ

ಈ ವೇಳೆ ರಾಜ್ ಕುಟುಂಬದಿಂದ ಸಿದ್ದಪಡಿಸಿದ ಪಿಪಿಟಿ ವೀಕ್ಷಣೆಯನ್ನು ಮಾಡಿದ ಸಿಎಂ, ಪಿಡಬ್ಲ್ಯೂಡಿ ಇಲಾಖೆಯಿಂದ ಯೋಜನೆ ಅಂದಾಜು ಮೊತ್ತ ತರಿಸಲು ಸೂಚನೆ ನೀಡಿದರು. ಪಿಡಬ್ಲ್ಯೂಡಿ ಇಲಾಖೆಯಿಂದ ಯೋಜನೆಯ  ರೂಪರೇಷ ತಯಾರದ ಬಳಿಕ ಮತ್ತೊಂದು ಸುತ್ತಿನೆ ಸಭೆ ಮಾಡೋಣ ಎಂದು ಸಿಎಂ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next