Advertisement

ಡಾ|ಸಂಧ್ಯಾ ಎಸ್‌. ಪೈ ಅವರಿಗೆ “ಕಾರಂತ ಪ್ರಶಸ್ತಿ’

01:49 AM Oct 03, 2021 | Team Udayavani |

ಮಂಗಳೂರು: ಕಲ್ಕೂರ ಪ್ರತಿಷ್ಠಾನ ಮತ್ತು ಕಾರಂತ ಹುಟ್ಟುಹಬ್ಬ ಆಚರಣಾ ಸಮಿತಿಯು ಈ ವರ್ಷದ “ಕಾರಂತ ಪ್ರಶಸ್ತಿ’ಗೆ ಲೇಖಕರು, “ತರಂಗ’ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ| ಸಂಧ್ಯಾ ಎಸ್‌. ಪೈ ಅವರನ್ನು ಆಯ್ಕೆ ಮಾಡಿದೆ.

Advertisement

ಮಂಗಳೂರಿನಲ್ಲಿ ಅ. 10ರಂದು ನಡೆಯಲಿರುವ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬ ಸಮಾರಂಭದಲ್ಲಿ ಡಾ| ಸಂಧ್ಯಾ ಎಸ್‌. ಪೈ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್‌. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

ಡಾ| ಸಂಧ್ಯಾ ಎಸ್‌. ಪೈ ಅವರು ಕನ್ನಡ ಪತ್ರಿಕೋದ್ಯಮದಲ್ಲಿ ಓರ್ವ ಮಹಿಳಾ ಸಾಧಕರಾಗಿ, “ತರಂಗ’ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾಗಿ ಪತ್ರಿಕೆಯನ್ನು ಮುನ್ನಡೆಸುವ ಮೂಲಕ ಮೌಲಿಕ ಚಿಂತನೆಯೊಂದಿಗೆ ಓದುಗರಿಗೆ ಸಮಗ್ರ ಜ್ಞಾನ ಭಂಡಾರವನ್ನು ಒದಗಿಸುತ್ತಿದ್ದಾರೆ.

ಇದನ್ನೂ ಓದಿ:ಗಾಂಧೀಜಿ ನೈತಿಕ ಭಾರತ ಕಟ್ಟುವ ಶಕ್ತಿ: ಬೊಮ್ಮಾಯಿ

ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯ 2013ರಲ್ಲಿ ಗೌರವ ಡಾಕ್ಟರೆಟ್‌ ಪದವಿ ನೀಡಿ ಗೌರವಿಸಿದೆ. ಪತ್ರಿಕೋದ್ಯಮದಲ್ಲಿ ಉನ್ನತ ಸಾಧನೆಗಾಗಿ “ಅತ್ತಿಮಬ್ಬೆ ಪ್ರಶಸ್ತಿ’ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next