Advertisement

ಗ್ರಾಪಂ ಕಾಮಗಾರಿ ವೀಕ್ಷಿಸಿದ ಸಿಇಒ ಡಾ|ಸಸಿ

05:01 PM Jul 02, 2021 | Team Udayavani |

ಕಲಬುರಗಿ: ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಡಿಹಾಳ ತಾಂಡಾ ಮತ್ತು ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ| ದಿಲೀಷ್‌ ಸಸಿ ಗುರುವಾರ ಪರಿಶೀಲಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡಾಗಳ ಮೂಲಭೂತ ಸೌಕರ್ಯ ವೀಕ್ಷಿಸಿದ ಅವರು, ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರ ಸಮ್ಮುಖದಲ್ಲಿ ಸೌಲಭ್ಯ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅ ಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಅರಣ್ಯ ಇಲಾಖೆಯಿಂದ ಈಗಾಗಲೇ ವಿಮಾನ ನಿಲ್ದಾಣದ ಆವರಣದಲ್ಲಿ ಸುಮಾರು 980 ಸಸಿಗಳನ್ನು ನೆಟ್ಟಿದ್ದು, ಅವುಗಳನ್ನು ವೀಕ್ಷಿಸಿದ ಸಿಇಒ ಗ್ರಾಪಂ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಇದೇ ವೇಳೆ ಗ್ರಾಪಂ ಅಧ್ಯಕ್ಷ ಪ್ರವೀಣ ಬಿ.ಆಡೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಬೇಕೆಂದು ಮನವಿ ಸಲ್ಲಿಸಿದರು. ಜತೆಗೆ ಸುವರ್ಣ ಗ್ರಾಮೋದಯ ಯೋಜನೆಯಡಿ ಅನೇಕ ಕಾಮಗಾರಿಗಳು ಅಪೂರ್ಣಗೊಂಡಿದ್ದು, ಈ ಕಾಮಗಾರಿಗಳನ್ನು ಮುಂದುವರಿಸಬೇಕೆಂದು ಮಾಜಿ ಅಧ್ಯಕ್ಷ ಸಂತೋಷ ಆಡೆ ಒತ್ತಾಯಿಸಿದರು.

ಗ್ರಾಪಂ ಸದಸ್ಯರಾದ ಶಾಮ್‌ ಆಡೆ, ರಾಜು ಚವ್ಹಾಣ, ರವಿ ರಾಠೊಡ, ಅಶೋಕ ರಾಠೊಡ, ಗುರುನಾಥ ಪವಾರ, ಕಾರ್ಯನಿರ್ವಾಹಕ ಅಭಿಯಂತರ ಮೊಹಮ್ಮದ್‌ ಅಜಿಜೊjàದ್ದೀನ್‌, ತಾಪಂ ಇಒ ಮಾನಪ್ಪ ಕಟ್ಟಿಮನಿ, ಪಿಡಿಒ ಮಲ್ಲಿನಾಥ ರಾವೂರ, ಸಂಗಯ್ಯ ಸ್ವಾಮಿ ಹಿರೇಮಠ, ಹೋರಾಟಗಾರರಾದ ಸಂಗಯ್ಯ ಸ್ವಾಮಿ ಹಿರೇಮಠ, ಮಲ್ಲಿಕಾರ್ಜುನ ಕಿಳ್ಳಿ, ರಮೇಶ ಮೀಸಿ, ಶಿವಾನಂದ ಕಿಳ್ಳಿ ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next