Advertisement

ಭುವನಗಿರಿ ಸಂಸ್ಥಾನ ಮಠದ ಶ್ರೀ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಕೋವಿಡ್ ಗೆ ಬಲಿ

06:38 PM Jun 07, 2021 | Team Udayavani |

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಕವಲೆದುರ್ಗದ ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠದ ಶ್ರೀ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಕರೋನಾದಿಂದ ಲಿಂಗೈಕ್ಯರಾಗಿದ್ದಾರೆ.

Advertisement

ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಶ್ರೀಗಳು, ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮೂರು ದಿನದ ಹಿಂದೆ ಸ್ವಾಮೀಜಿ ಉಸಿರಾಟದಲ್ಲಿ ತೊಂದರೆ‌ ಕಾಣಿಸಿಕೊಂಡಿದ್ದರಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಇಂದು (ಜೂನ್ 07) ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಲಿಂಗೈಕ್ಯರಾಗಿದ್ದಾರೆ.

ಓದಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಕವಲೆದುರ್ಗ ಶ್ರೀಗಳು ಐದು ಪಿಎಚ್ ಡಿ ಪದವಿ ಪಡೆದಿದ್ದರು. ಜೊತೆಗೆ ತಮ್ಮ ಮಠದಲ್ಲಿ ಯಾವುದೇ ಸೇವಕರನ್ನು ಇಟ್ಟುಕೊಳ್ಳದ ಸ್ವಾಮೀಜಿ ಮಠದ ಎಲ್ಲ ಕೆಲಸವನ್ನು ತಾವೇ ಮಾಡುತ್ತಿದ್ದರು. ಜೊತೆಗೆ ಮಠಕ್ಕೆ ಆಗಮಿಸುವ ಭಕ್ತರಿಗೆ ತಾವೇ ಅಡುಗೆ ಮಾಡಿ ದಾಸೋಹ ಮಾಡುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next