Advertisement

ಬೇಳೂರು ವಿರುದ್ಧ ಮಾನನಷ್ಟ ಕೇಸ್‌ಗೆ ಡಾ.ಸಿದ್ದರಾಮಯ್ಯ ಚಿಂತನೆ

12:16 PM Nov 02, 2018 | |

ಮಂಡ್ಯ: ಚುನಾವಣಾ ಕಣದಿಂದ ನಿವೃತ್ತಿಯಾಗಲಿದ್ದಾರೆ ಎಂದು ಗೊಂದಲ ಮೂಡಿಸುವ ಹೇಳಿಕೆ ನೀಡಿದ್ದ  ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಬೇಳೂರು ಗೋಪಾಲಕೃಷ್ಣ ವಿರುದ್ಧ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರು ಸಿಡಿದೆದ್ದಿದ್ದು, ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ ಮಾತ್ರವಲ್ಲದೆ ಮಾನನಷ್ಟ ಕೇಸ್‌ ದಾಖಲಿಸಲು ಚಿಂತನೆ ನಡೆಸಿದ್ದಾರೆ. 

Advertisement

ಶುಕ್ರವಾರ ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ದೂರು ನೀಡಿರುವ ಡಾ.ಸಿದ್ದರಾಮಯ್ಯ ಅವರು ನನ್ನ ತೇಜೊವಧೆ ಮಾಡಲಾಗಿದೆ. ಬೇಳೂರು ಗೋಪಾಲ ಕೃಷ್ಣ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. 

ನೀತಿ ಸಂಹಿತೆ ಜಾರಿ ಇರುವಾಗಲೇ ಈ ರೀತಿ ಹೇಳಿಕೆ ನೀಡಿ ಮತದಾರರಲ್ಲಿ ಗೊಂದಲ ಮೂಡಿಸಿದ್ದಾರೆ. ನನಗೆ ಸಾಕಷ್ಟು ಕರೆಗಳು ಬರುತ್ತಿವೆ ಹೀಗಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next