Advertisement

Dr.ಸುಧಾಮೂರ್ತಿ ರಾಜ್ಯಸಭೆಗೆ: ಜೋಶಿ,ಎಚ್‌ಡಿಕೆ ಸೇರಿ ಗಣ್ಯರಿಂದ ಶುಭ ಹಾರೈಕೆ

09:03 PM Mar 08, 2024 | Team Udayavani |

ಬೆಂಗಳೂರು: ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಸಮಾಜ ಸೇವಕರೂ ಆಗಿರುವ ಡಾ.ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದಕ್ಕೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.

Advertisement

“ಮಹಿಳಾ ದಿನಾಚರಣೆ’ಯಂದೇ ಕನ್ನಡ ನೆಲದ ಸಾಧಕ ಮಹಿಳೆಯನ್ನು ಗುರುತಿಸಿ ಗೌರವಿಸಿರುವ ಪ್ರಧಾನಿ ಮೋದಿ ಅಭಿನಂದನಾರ್ಹರು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ವಿನಮ್ರತೆ, ಸರಳ-ಸಜ್ಜನಿಕೆ, ಸೇವಾತತ್ಪರತೆಯ ಮೂಲಕ ಸಮಾಜಕ್ಕೆ ಮಿಡಿಯುತ್ತಿರುವ ಸುಧಾಮೂರ್ತಿ ಅವರಿಗೆ ಶುಭವಾಗಲಿ, ಅವರಿಂದ ಕನ್ನಡನಾಡಿಗೆ ಒಳಿತಾಗಲಿ ಎಂದು ಕುಮಾರಸ್ವಾಮಿ ಹಾರೈಸಿದ್ದಾರೆ.

ಪ್ರಹ್ಲಾದ ಜೋಶಿ ಅಭಿನಂದನೆ: ಹುಬ್ಬಳ್ಳಿಯವರಾದ ಹಾಗೂ ಪದ್ಮಶ್ರೀ ಪುರಸ್ಕೃತರಾದ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಖುಷಿಯಾಗಿದೆ. ಅವರು ಸರಳ ಬದುಕಿಗೆ ಖ್ಯಾತಿ ಪಡೆದಿದ್ದಾರೆ. ಅವರಿಗೆ ಈ ಸ್ಥಾನ ನೀಡಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next