Advertisement

ಡಾ|ವಿರಾರ್‌ ಶಂಕರ್‌ ಬಿ. ಶೆಟ್ಟಿ ಅವರಿಗೆ ಗೌರವ

01:38 PM Jul 13, 2021 | Team Udayavani |

ಮುಂಬಯಿ, ಜು. 12: ಬಂಟರ ಸಂಘ ಮುಂಬಯಿ ಇದರ ವಿಶ್ವಸ್ಥ ಸದಸ್ಯರ ಹಾಗೂ ಮಾಜಿ ಅಧ್ಯಕ್ಷರ ಸಭೆ ಇತ್ತೀಚೆಗೆ ಕುರ್ಲಾ ಪೂರ್ವದಲ್ಲಿನ ಬಂಟರ ಭವನದ ಸಂಘದ ಉನ್ನತ ಶಿಕ್ಷಣ ಕಾಲೇಜು ಸಭಾಗೃಹದಲ್ಲಿ ಜರಗಿತು.

Advertisement

ಇತ್ತೀಚೆಗೆ ಬಂಟರ ಸಂಘದ ನೂತನ ವಿಶ್ವಸ್ಥರಾಗಿ ನೇಮಕಗೊಂಡ ಡಾ| ವಿರಾರ್‌ ಶಂಕರ್‌ ಬಿ. ಶೆಟ್ಟಿ ಅವರನ್ನು ಸಭೆಯಲ್ಲಿ ಸಂಘದ ವಿಶ್ವಸ್ಥರು ಹಾಗೂ ಮಾಜಿ ಅಧ್ಯಕ್ಷರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್‌. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಹರೀಶ್‌ ಡಿ. ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಬಂಟರ ಸಂಘದ ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಆರ್‌. ಸಿ. ಶೆಟ್ಟಿ, ಬೊರಿವಲಿ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಡಾ| ಪಿ. ವಿ. ಶೆಟ್ಟಿ ಪ್ರಭಾಕರ ಎಲ್‌. ಶೆಟ್ಟಿ, ಪದ್ಮನಾಭ ಎಸ್‌.ಪಯ್ಯಡೆ, ಟ್ರಸ್ಟಿ ಶಾಂತಾರಾಮ ಕೆ. ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಶಾಂತಾರಾಮ ಬಿ. ಶೆಟ್ಟಿ, ಬಿ. ಆರ್‌. ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಸಿಎ ಐ. ಆರ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next