Advertisement

ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಿ

01:12 PM Jul 20, 2020 | Suhan S |

ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ಕೂಡಲೇ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ಕೃಷಿ ಚಟುವಟಿಕೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್‌ಗೆ ಮನವಿ ಸಲ್ಲಿಸಿದರು.

Advertisement

ತುಂಗಭದ್ರಾ ಜಲಾಶಯದಲ್ಲಿ ಒಟ್ಟು 26 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯಕ್ಕೆ 7 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ತುಂಗಭದ್ರಾ ಜಲಾನಯನ ಪ್ರದೇಶವಾದ ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ತುಂಗಾ ಜಲಾಶಯ ತುಂಗಿ ಹೆಚ್ಚುವರಿ 15 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದೆ. ಈ ನೀರು ಸಹ ತುಂಗಭದ್ರಾ ಜಲಾಶಯಕ್ಕೆ ಹರಿದು ಬರಲಿದೆ. ಹೀಗಾಗಿ ಜುಲೈ 25ರಿಂದ ಬಳ್ಳಾರಿ-ಕೊಪ್ಪಳ-ರಾಯಚೂರು ಜಿಲ್ಲೆಗಳ ಎಚ್‌ಎಲ್‌ಸಿ, ಎಲ್‌ಎಲ್‌ಸಿ, ಎಲ್‌ಬಿಸಿಯ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು. ಜತೆಗೆ ಕಾಲುವೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಲ್ಲಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ವೇಳೆ ಸಂಘದ ಗಂಗಾವತಿ ವೀರೇಶ್‌, ಸಿ.ವೀರಭದ್ರರಾವ್‌ ಸೇರಿ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next