Advertisement

ಬೀಳಗಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

05:28 AM May 17, 2020 | Suhan S |

ಹನುಮಸಾಗರ: ಕಬ್ಬರಗಿ ಗ್ರಾಪಂ ವ್ಯಾಪ್ತಿಯಲ್ಲಿ ಎನ್‌ಆರ್‌ಐಜಿ ಯೋಜನೆಯಡಿ ಬೀಳಗಿ ಕೆರೆ ಹೂಳೆತ್ತುವ ಕಾಮಗಾರಿಗೆ ಶಾಸಕ ಅಮರೇಗೌಡ ಬಯ್ಯಾಪೂರ ಚಾಲನೆ ನೀಡಿದರು.

Advertisement

ಈ ವೇಳೆ ಮಾತನಾಡಿದ ಶಾಸಕರು, ಕೋವಿಡ್ ವೈರಸ್‌ ಹರಡುವುದನ್ನು ತಡೆಗಟ್ಟಲು ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ಸಾಕಷ್ಟು ಪರದಾಡುತ್ತಿರುವುದನ್ನು ಮನಗಂಡು ಸರ್ಕಾರ ಎನ್‌ಆರ್‌ ಐಜಿ ಯೋಜನೆಯಡಿ ಬೀಳಗಿ ಕೆರೆ ಹೂಳೆತ್ತುವ ಕಾಮಗಾರಿಗೆ ಅನುಕೂಲ ಮಾಡಿಕೊಟ್ಟಿದೆ. ಆದ್ದರಿಂದ ಪ್ರತಿಯೊಬ್ಬರು ಕಾಮಗಾರಿಯಲ್ಲಿ ಮಾಸ್ಕ್ಗಳನ್ನು ಹಾಕಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡ ಕೆಲಸ ಮಾಡಬೇಕು ಎಂದು ಹೇಳಿದರು. ಪಿಡಿಒ ನಿಂಗಪ್ಪ ಮೂಲಿಮನಿ ಮಾತನಾಡಿ, ಕಬ್ಬರಗಿ ಗ್ರಾಪಂ ವ್ಯಾಪ್ತಿಯ ಬೀಳಗಿ ಕೆರೆ ಹೂಳೆತ್ತಲು ಅಂದಾಜು 10 ಲಕ್ಷ ಅನುದಾನ ಮೀಸಲಿಡಲಾಗಿದೆ. ದುಡಿಯುವ ಕೈಗಳಿಗೆ ಕೆಲಸ ನೀಡುವ ಉದ್ದೇಶದಿಂದ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಕಾಮಗಾರಿಯಲ್ಲಿ ಒಟ್ಟು 238 ಕೂಲಿ ಕಾರ್ಮಿಕರು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಗ್ರಾಪಂ ಅಧ್ಯಕ್ಷ ಮಹಾಂತೇಶ ವಜ್ಜಲ, ಮಾಜಿ ಅಧ್ಯಕ್ಷ ಶಿವಲಿಂಗ ಮೇಲಸಕ್ಕರಿ ಸೇರಿದಂತೆ ಗ್ರಾಪಂ ಸಿಬ್ಬಂದಿ ಹಾಗೂ ಕೂಲಿಕಾರ್ಮಿಕರು ಇದ್ದರು. ಕಾಮಗಾರಿಯಲ್ಲಿ ಪಾಲ್ಗೊಂಡ ಕಾರ್ಮಿಕರನ್ನು ಖುದ್ದು ಶಾಸಕರೇ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿದ್ದು ವಿಶೇಷವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next