Advertisement

ಬಿಂದಿಗೆಯೊಂದಿಗೆ ಗ್ರಾಪಂಗೆ ಮುತ್ತಿಗೆ

12:29 PM Jun 11, 2022 | Team Udayavani |

ಅಫಜಲಪುರ: ತಾಲೂಕಿನ ದೇವಲ ಗಾಣಗಾಪುರದ ಇಂದಿರಾ ನಗರ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು ಕೊಡ, ಬಿಂದಿಗೆಗಳೊಂದಿಗೆ ಮಹಿಳೆಯರು ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

Advertisement

ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು, ಸರ್ಕಾರ ಗ್ರಾ.ಪಂಗಳಿಗೆ ಸಾಕಷ್ಟು ಪ್ರಮಾಣದ ಹಣ ನೀಡುತ್ತಿದೆ. ಅದರಲ್ಲೂ ಕುಡಿಯುವ ನೀರಿಗಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ. ಅದನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡು ಜನರಿಗೆ ನೀರು ಕೊಡುತ್ತಿಲ್ಲ ಎಂದು ದೂರಿದರು.

ದೇವಲ ಗಾಣಗಾಪುರ ಭೀಮಾ ನದಿ ದಂಡೆಯಲ್ಲಿರುವ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾಗಿದ್ದರೂ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಡುವಂತ ಪರಿಸ್ಥಿತಿ ಬಂದಿರುವುದು ವಿಪರ್ಯಾಸವಾಗಿದೆ. ಸಂಬಂಧಪಟ್ಟವರು ಕಾಗದದಲ್ಲಿ ಕಾಮಗಾರಿ ತೋರಿಸಿ, ಹಣ ಖರ್ಚು ಮಾಡಿ ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಸಂಬಂಧಪಟ್ಟವರು ಎರಡು ದಿನಗಳಲ್ಲಿ ಇಂದಿರಾ ನಗರ ವಾರ್ಡ್‌ಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next