Advertisement

ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ

03:08 PM May 10, 2022 | Team Udayavani |

ಸಿರುಗುಪ್ಪ: ನಗರದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆ ಇಲ್ಲದೆ ಹಾಳಾಗಿವೆ. ನಗರದ 31 ವಾರ್ಡ್‌ಗಳ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ 2-3 ವಾರ್ಡ್‌ಗಳಿಗೆ ಸಮೀಪದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ.

Advertisement

ನಗರದ 11, 16, 18, 21, 23, 26 ವಾರ್ಡ್‌ಗಳಲ್ಲಿ ಜನರಿಗೆ ಶುದ್ಧ ಕುಡಿಯುವ ನೀರೊದಗಿಸುವ ಉದ್ದೇಶದಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು, 16 ಮತ್ತು 18ನೇ ವಾರ್ಡ್‌ನಲ್ಲಿ ಮಾತ್ರ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿವೆ.

11, 21, 23, 26ನೇ ವಾರ್ಡ್‌ಗಳಲ್ಲಿ ನಿರ್ಮಾಣವಾಗಿ ರುವ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಬೇಕಾದ ಬೋರ್‌ವೆಲ್‌ ನೀರಿನ ಸೌಲಭ್ಯವಿಲ್ಲದ ಕಾರಣ ಈ ನಾಲ್ಕು ಘಟಕಗಳು ಸ್ಥಗಿತಗೊಂಡಿವೆ. ಈ ಘಟಕಗಳಿಗೆ ನೀರು ಪೂರೈಕೆ ಮಾಡಲೆಂದು ಹಾಕಲಾಗಿದ್ದ ಬೋರ್‌ವೆಲ್‌ಗ‌ಳಲ್ಲಿ ಸಂಪೂರ್ಣವಾಗಿ ನೀರು ಬತ್ತಿ ಹೋಗಿದ್ದು, ಘಟಕಗಳ ಸ್ಥಗಿತಕ್ಕೆ ಕಾರಣವೆಂದು ಅಧಿಕಾರಿಗಳು ತಿಳಿಸಿದ್ದಾರೆ. ಹರಿಗೋಲ್‌ ಘಾಟ್‌ನಿಂದ ನಗರಸಭೆಯವರು ನಗರಕ್ಕೆ ಪೂರೈಕೆ ಮಾಡುವ ನೀರು ಕುಡಿಯಲು ಯೋಗ್ಯವಾಗಿಲ್ಲದ ಕಾರಣ ನಗರದ ಪ್ರತಿಯೊಬ್ಬರು ಕುಡಿಯುವ ನೀರನ್ನು ಶುದ್ಧ ಕುಡಿಯುವ ನೀರಿನ ಘಟಕಗಳಿಂದ ತಂದು ಕುಡಿಯುತ್ತಿದ್ದಾರೆ. 11, 21, 23, 26ನೇ ವಾರ್ಡ್‌ಗಳ ಜನರು ಬೇರೆಡೆಗೆ ತೆರಳಿ ಶುದ್ಧ ಕುಡಿಯುವ ನೀರನ್ನು ತರುತ್ತಿದ್ದಾರೆ. ನಮ್ಮ ವಾರ್ಡ್‌ನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಯಾವುದೇ ಪ್ರಯೋಜನವಿಲ್ಲ, ಸದ್ಯ ಘಟಕ ಸ್ಥಗಿತಗೊಂಡಿದ್ದು, ಕುಡಿಯುವ ನೀರನ್ನು ಬೇರೆಡೆಯಿಂದ ತರುವುದು ಅನಿವಾರ್ಯವಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರು ಹೆಚ್ಚಾಗಿ ಬಳಕೆಯಾಗುತ್ತವೆ, ಶುದ್ಧ ನೀರು ಸಮೀಪ ಸಿಕ್ಕರೆ ಅನುಕೂಲ ಆದರೆ ನಮ್ಮಲ್ಲಿರುವ ಘಟಕದಿಂದ ಯಾವುದೇ ಪ್ರಯೋಜನವಿಲ್ಲದಂತಾಗಿದೆ ಎಂದು 24ನೇ ವಾರ್ಡಿನ ನಿವಾಸಿಗಳಾದ ಬಸಪ್ಪ, ಯಂಕಪ್ಪ, ಯಶೋಧ, ಅನುಸೂಯ, ಮಂಜುಳ ಆರೋಪಿಸಿದ್ದಾರೆ. ಒಟ್ಟು 6 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಇದರಲ್ಲಿ ಬೋರ್‌ವೆಲ್‌ ನೀರಿನ ಕೊರತೆಯಿಂದ ನಾಲ್ಕು ಘಟಕಗಳು ಸ್ಥಗಿತಗೊಂಡಿದ್ದು, 2 ಘಟಕಗಳು ಕಾರ್ಯನಿರ್ವಹಿಸುತ್ತಿವೆ.

ನಗರದಲ್ಲಿ ಶುದ್ಧ ಕುಡಿಯುವ 2 ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನುಳಿದ ನಾಲ್ಕು ಘಟಕಗಳು ಬೋರ್‌ವೆಲ್‌ ನೀರಿನ ಕೊರತೆಯಿಂದ ಸ್ಥಗಿತಗೊಂಡಿವೆ. ಈ ಘಟಕಗಳನ್ನು ನಿರ್ವಹಣೆ ಮಾಡಲು ಬೇರೆ ಬೇರೆ ಏಜೆನ್ಸಿಯವರಿಗೆ ಗುತ್ತಿಗೆ ನೀಡಲಾಗಿದೆ. ರವಿಂದ್ರನಾಯ್ಕ, ಎಇಇ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

Advertisement

ನಗರದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಇವುಗಳ ನಿರ್ವಹಣೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವ್ಯಾಪ್ತಿಗೆ ಬರುತ್ತದೆ. ಗಂಗಾಧರ, ನಗರಸಭೆ ಎಇಇ

ಆರ್.ಬಸವರೆಡ್ಡಿ ಕರೂರು

Advertisement

Udayavani is now on Telegram. Click here to join our channel and stay updated with the latest news.

Next