Advertisement

ಉಣಕಲ್ಲ ರಾಜಕಾಲುವೆ ಒತ್ತುವರಿ ತೆರವಿಗೆ ಕ್ರಮ: ಶೆಟ್ಟರ

05:05 PM May 28, 2018 | Team Udayavani |

ಹುಬ್ಬಳ್ಳಿ: ಮಳೆ ನೀರು ಸರಾಗವಾಗಿ ಹರಿಯುವ ನಿಟ್ಟಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚಾರಣೆ ಆರಂಭಿಸಲಾಗುವುದು ಎಂದು ಶಾಸಕ ಜಗದೀಶ ಶೆಟ್ಟರ ಹೇಳಿದರು.ರವಿವಾರ ಇಲ್ಲಿನ ವಿನಾಯಕ ನಗರದಲ್ಲಿ ಸನ್ಮಾನ ಸ್ವೀಕರಿಸಿ, ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಉಣಕಲ್ಲನಿಂದ ಹರಿಯುವ ರಾಜಕಾಲುವೆ ಒತ್ತುವರಿಯಾಗಿದೆ. ಇದರಿಂದ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲ. ಶೀಘ್ರದಲ್ಲಿ ಕಾಲುವೆ ಒತ್ತುವರಿ ತೆರವುಗೊಳಿಸುವ ಮೂಲಕ ದುರಸ್ತಿ ಕಾರ್ಯ ಆರಂಭಿಸಲಾಗುವುದು. ಇದರಿಂದ ವಿನಾಯಕ ನಗರ ಸೇರಿದಂತೆ ಇತರೆ ಪ್ರದೇಶಗಳಲ್ಲಿ ತಲೆದೋರುವ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದರು.

Advertisement

ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ರಸ್ತೆ ಡಾಂಬರೀಕರಣ ಟೆಂಡರ್‌ ಪ್ರಕ್ರಿಯೆ ಮುಂದುವರಿದಿರಲಿಲ್ಲ. ಹೀಗಾಗಿ ಚುನಾವಣೆ ಪೂರ್ವದಲ್ಲಿ ಈ ಭಾಗದ ಜನರಿಗೆ ನೀಡಿದ ಭರವಸೆಯಂತೆ 24 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗಿದೆ. ಉಳಿದಂತೆ ಚರಂಡಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು. ಎಲ್ಲಾ ಕಾಲೊನಿಗೆ ಭೇಟಿ: ಕ್ಷೇತ್ರದಲ್ಲಿ ಸಿಆರ್‌ ಎಫ್ ನಿಧಿ ಸೇರಿದಂತೆ ವಿವಿಧ ಅನುದಾನದಲ್ಲಿ ಕಾಮಗಾರಿಗಳು ನಡೆಯುತ್ತಿದ್ದು, ಎರಡು ದಿನಗಳ ನಂತರ ಎಲ್ಲಾ ಕಾಲೊನಿಗಳಿಗೆ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಹಾಗೂ ಸಮಸ್ಯೆಗಳನ್ನು ಪಟ್ಟಿ ಅವುಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಹೇಳಿದರು.

ಶ್ರೀ ವಿನಾಯಕ ದೇವಸ್ಥಾನದ ಸಂಘದ ಅಧ್ಯಕ್ಷ ಪಿ.ವೈ. ನಾಯಕ ಮಾತನಾಡಿ, ನಾಲ್ಕು ದಶಕಗಳನ್ನು ಕಂಡಿರುವ ಈ ಬಡಾವಣೆ ಮೂಲಸೌಲಭ್ಯದಿಂದ ವಂಚಿತವಾಗಿದೆ. ಮಳೆಗಾದಲ್ಲಿ ಓಡಾಡಲು ದೊಡ್ಡ ಸಮಸ್ಯೆಯಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಬೇಕು. ಬಡಾವಣೆಯ ಜನ ದೇವಸ್ಥಾನ ನಿರ್ಮಿಸಿದ್ದು ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೂ ಮೊದಲು ಸ್ಥಳೀಯರು ಜಗದೀಶ ಶೆಟ್ಟರ ಅವರಿಗೆ ಕಾಲೋನಿಯ ಸಮಸ್ಯೆಗಳ ದರ್ಶನ ಮಾಡಿಸಿದರು. ರಸ್ತೆ, ಚರಂಡಿ ನೀರು ಹರಿಯುತ್ತಿರುವುದು ಸೇರಿದಂತೆ ಹಲವು ತೊಂದರೆಗಳನ್ನು ತೋರಿಸಿ ಶೀಘ್ರದಲ್ಲಿ ಅವುಗಳಿಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿದರು. ಪಾಲಿಕೆ ಸದಸ್ಯ ಮಹೇಶ ಬುರ್ಲಿ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಸಾವಕಾರ, ಸ್ಥಳೀಯರಾದ ಐ.ಎಸ್‌. ಹಂದಿಗೋಳ, ತನುಜಾ ಪಾಟೀಲ, ಅಶೋಕ ಕುನ್ನೂರ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next