Advertisement

ಕಲಬುರಗಿ-ಕೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಚಾಲನೆ

02:51 PM Sep 17, 2022 | Team Udayavani |

ಕಲಬುರಗಿ: ಬಹು ದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ಶ್ರೀ ಛತ್ರಪತಿ ಶಾಹು ಮಹಾರಾಜ್‌ ಟರ್ಮಿನಸ್‌ ಕೊಲ್ಲಾಪುರ ನಡುವಿನ ನೂತನ ಚೇರ್‌ಕಾರ್‌ ಎಕ್ಸ್‌ಪ್ರೆಸ್‌ (ಸಿಟ್ಟಿಂಗ್‌) ರೈಲಿಗೆ ಶನಿವಾರ ಚಾಲನೆ ನೀಡಲಾಯಿತು.

Advertisement

ಕೇಂದ್ರದ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹುಬ್ಬಳಿಯಿಂದ ವರ್ಚುವಲ್‌ ವೇದಿಕೆ ಮೂಲಕ ಸೊಲ್ಲಾಪುರ-ಮೀರಜ್‌ ಎಕ್ಸ್‌ಪ್ರೆಸ್‌ ರೈಲನ್ನು ಕಲಬುರಗಿ-ಕೊಲ್ಲಾಪುರ ವಿಸ್ತರಣೆಯ ಆರಂಭಿಕ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.

ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್‌ ಫಾರ್ಮ್ 1ರಲ್ಲಿ ನೂತನ ರೈಲಿನ ಆರಂಭಿಕ ಸಂಚಾರದ ಸಾಂಕೇತಿಕ ಉದ್ಘಾಟನೆ ಕಾರ್ಯ ಕ್ರಮ ಆಯೋಜಿಸಲಾಗಿತ್ತು. ಸಂಸದ ಡಾ|ಉಮೇಶ ಜಾಧವ, ಕೆಕೆಆರ್‌ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಸ್ಥಳೀಯವಾಗಿ ಹಸಿರು ನಿಶಾನೆ ತೋರಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಹಿಂದಿನ ಸರ್ಕಾರದ ಅವಧಿಯ ಏಳು ವರ್ಷದಲ್ಲಿ 2,700ಕಿ. ಮೀ ಡಬ್ಲಿಂಗ್‌ ಕಾರ್ಯವಾಗಿದ್ದರೆ, ನಮ್ಮ ಸರ್ಕಾರದಲ್ಲಿ ಇಷ್ಟೆ ಅವಧಿಯಲ್ಲಿ 12,000ಕಿ.ಮೀ ಹಳಿ ಡಬ್ಲಿಂಗ್‌ ಮಾಡಿದ್ದೇವೆ ಎಂದು ತಿಳಿಸಿದರು.

ವಂದೇ ಮಾತರಂ ರೈಲು ನೀಡಿ: ಕರ್ನಾಟಕಕ್ಕೆ ಮುಂದಿನ ದಿನದಲ್ಲಿ ಎರಡ್ಮೂರು “ವಂದೆ ಮಾತರಂ’ ರೈಲು ನೀಡಬೇಕೆಂದು ಕೇಂದ್ರದ ಕಲ್ಲಿದ್ದಲು ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ರಾವ್‌ ಸಾಹೇಬ್‌ ದಾದಾರಾವ್‌ ಪಟೀಲ ದಾನ್ವೆ ಅವರಲ್ಲಿ ಜೋಶಿ ಕೋರಿಕೊಂಡರು.

Advertisement

ಕೇಂದ್ರದ ಕಲ್ಲಿದ್ದಲ್ಲು ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ರಾವ್‌ ಸಾಹೇಬ್‌ ದಾದಾರಾವ್‌ ಪಟೀಲ ದಾನ್ವೆ ಮಾತನಾಡಿ, ಧಾರ್ಮಿಕ ಕ್ಷೇತ್ರ ಕೊಲ್ಲಾಪುರದ ಮಹಾಲಕ್ಷ್ಮೀ ದೇಗುಲಕ್ಕೆ ಸಂಪರ್ಕ ಸಾಧಿಸುವ ಕಲಬುರಗಿ-ಕೊಲ್ಲಾಪುರ ರೈಲು ಆರಂಭದಿಂದ ಈ ಭಾಗದ ರೈತರು, ಉದ್ಯಮಿಗಳು, ಯಾತ್ರಿಗಳು, ದೈನಂದಿನ ಓಡಾಟ ಮಾಡುವರಿಗೆ ತುಂಬಾ ಅನುಕೂಲವಾಗಲಿದೆ ಎಂದರು.

ಸಂಸದ ಡಾ|ಉಮೇಶ ಜಾಧವ, ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮಾಜಿ ಎಂಎಲ್‌ಸಿ ಅಮರನಾಥ ಪಾಟೀಲ, ಸೊಲ್ಲಾಪುರ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಶೈಲೇಶ ಗುಪ್ತಾ, ಸೀನಿಯರ್‌ ಡಿವಿಜನ್‌ ಅಪರೇಟಿಂಗ್‌ ಮ್ಯಾನೇಜರ್‌ ಪ್ರದೀಪ ಹಿರಾಡೆ, ಹರ್ಷಿತ್‌ ಬಿಸ್ನಾಯ್‌, ಕಲಬುರಗಿ ರೈಲು ನಿಲ್ದಾಣದ ಸ್ಟೇಷನ್‌ ಮ್ಯಾನೇಜರ್‌ ಆರ್‌.ಮೋನಿ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next