Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ದೆಹಲಿ ಯಲ್ಲಿ ರೈಲ್ವೆ ಸಚಿವರನ್ನು ಮಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ತಾವು ಭೇಟಿಯಾಗಿದ್ದು, ಬೇಲೂರು – ಹಾಸನ ನಡುವಿನ 38 ಕಿ.ಮೀ. ರೈಲು ಮಾರ್ಗವನ್ನು ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆ ಶೇ 50:50 ಅನುಪಾತದಲ್ಲಿ ನಿರ್ಮಾಣ ಮಾಡಲು ರೈಲ್ವೆ ಸಚಿವರು ಒಪ್ಪಿಕೊಂಡಿದ್ದಾರೆ. ಈ ಮಾರ್ಗದ ನಿರ್ಮಾಣವನ್ನು ರೈಲ್ವೆಯ ಲಿಂಕ್ ಡಾಕ್ಯೂಮೆಂಟ್ನಲ್ಲಿ ಸೇರಿಸಿ ಅಕ್ಟೋಬರ್ ನಂತರ ರೈಲು ಮಾರ್ಗ ನಿರ್ಮಾಣದ ಟೆಂಡರ್ ಕರೆಯುವುದಾಗಿಯೂ ರೈಲ್ವೆ ಸಚಿವರು ಸ್ಪಷ್ಟಪಡಿಸಿದರು ಎಂದು ಹೇಳಿದರು.
Related Articles
ಅಂತ್ಯದ ವೇಳೆಗೆ ಈ ಮಾರ್ಗದ ಸಮೀಕ್ಷೆ ಪೂರ್ಣಗೊಳಿಸಲಾಗುವುದು. ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗ ನಿರ್ಮಾಣ ಚುರುಕುಗೊಳಿಸಲೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈಲ್ವೆ ಸಚಿವರನ್ನು ಒತ್ತಾಯಿಸಿದರು ಎಂದರು.
Advertisement
ಮಂಗಳೂರು – ಹಾಸನ – ಬೆಂಗಳೂರು – ಚನ್ನೈ ನಡುವೆ ಶತಾಬ್ದಿ ಎಕ್ಸ್ಪ್ರೆಸ್ ರೈಲು ಸಂಚಾರ, ಮಂಗಳೂರು – ಬೆಂಗಳೂರು ನಡುವೆ ಹೆಚ್ಚು ರೈಲುಗಳ ಸಂಚಾರ ಆರಂಭಿಸುವಂತೆಯೂ ಮನವಿ ಮಾಡಲಾಗಿದೆ ಎಂದು ವಿವರ ನೀಡಿದರು. ಬೇಲೂರು ಕ್ಷೇತ್ರದ ಶಾಸಕ ಕೆ.ಎಸ್.ಲಿಂಗೇಶ್ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.