Advertisement
ತಾಲೂಕಿನ ಕಸಬಾ ಹೋಬಳಿ ಕನ್ನಮಂಗಲ ಪಾಳ್ಯ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ವೀಕ್ಷಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನ ಸಮಗ್ರ ಅಭಿವೃದ್ಧಿಯ ಚಿಂತನೆ ಯೊಂದಿಗೆ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದೇವೆ. 2023 ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದರೆ ಅವರು ಒಂದು ದಿವಸದಲ್ಲೇ ಕನ್ನಮಂಗಲಪಾಳ್ಯ ರಸ್ತೆ ಅಗಲೀಕರಣ ಮಾಡಿ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಕನ್ನಮಂಗಲಪಾಳ್ಯವನ್ನು ಸಿಂಗಾಪುರ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.
Related Articles
Advertisement
ಗ್ರಾಪಂ ಸದಸ್ಯ ಸೋಮಶೇಖರ್, ತಾಲೂಕು ಜೆಡಿಎಸ್ ಅಧ್ಯಕ್ಷ ಆರ್. ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ, ತಾಪಂ ಮಾಜಿ ಸದಸ್ಯ ಸಾದಹಳ್ಳಿ ಎಸ್.ಮಹೇಶ್, ಮುಖಂಡ ರಾಜಗೋಪಾಲ್, ನಾರಾಯಣಗೌಡ, ಕೆಂಪೇಗೌಡ, ನಜೀರ್ ಅಹಮದ್, ವೆಂಕಟಗಿರಿಕೋಟೆ ಗ್ರಾಪಂ ಅಧ್ಯಕ್ಷ ಎಚ್. ಶ್ರೀನಿವಾಸ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಪಟಾಲಪ್ಪ, ತಾಲೂಕು ಸೊಸೈಟಿ ಅಧ್ಯಕ್ಷ ಎ.ದೇವರಾಜ್, ನಿರ್ದೇಶಕ ಕಾಮೇನಹಳ್ಳಿ ರಮೇಶ್, ಗಂಗಾಧರ್, ಕಸಬಾ ಹೋಬಳಿ ಜೆಡಿಎಸ್ ಅಧ್ಯಕ್ಷ ಚಿಕ್ಕನಾರಾಯಣಸ್ವಾಮಿ, ಬೊಮ್ಮವಾರ ವಿಎಸ್ಎಸ್ ಎನ್ ಅಧ್ಯಕ್ಷ ಟಿ. ರವಿ, ಮುಖಂಡ ಸಿರಾಜ್ ಸಾಬ್, ನಜೀರ್, ನರೇಂದ್ರ, ಪ್ರಭಾಕರ್, ಸೊಣ್ಣೇಗೌಡ, ಬಂಗಾರಪ್ಪ ಹಾಗೂ ಗ್ರಾಮಸ್ಥರು ಇದ್ದರು.
ಪ್ರತಿ ಹಳ್ಳಿಯಲ್ಲೂ ಕಾಂಕ್ರೀಟ್ ರಸ್ತೆ ನಿರ್ಮಾಣ : ಕನ್ನಮಂಗಲ ಪಾಳ್ಯ ಗ್ರಾಮಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಕರೆಸಿ ಒಂದು ಕಾರ್ಯಕ್ರಮ ಮಾಡಲಾಗುವುದು. ಈಗಾಗಲೇ ಪ್ರತಿ ಹಳ್ಳಿಯಲ್ಲೂ 50 ಲಕ್ಷದಿಂದ ಒಂದು ಕೋಟಿವರೆಗೆ ಕಾಂಕ್ರೀಟ್ ರಸ್ತೆ ಮಾಡ ಲಾಗಿದೆ. ಕೆಲವರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎಂದು ಟೀಕೆ ಮಾಡುತ್ತಾರೆ. ನಾವು ಮಾಡಿರುವ ಅಭಿವೃದ್ಧಿ ಕಾರ್ಯ ಒಂದು ಬಾರಿ ನೋಡಲಿ. ಯಾವುದೇ ಗ್ರಾಮದಲ್ಲಿ ಶಾಸಕರು ಇಂತಹ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದು ನಾಮಫಲಕ ಹಾಕಿಸಿಲ್ಲ ಎಂದು ಶಾಸಕ ಎಲ್. ಎನ್. ನಾರಾಯಣಸ್ವಾಮಿ ಹೇಳಿದರು.