Advertisement

ಇಂದು ಹಸಿರು ಕರ್ನಾಟಕ ಯೋಜನೆಗೆ ಚಾಲನೆ

06:00 AM Aug 15, 2018 | Team Udayavani |

ಬೆಂಗಳೂರು: ಅರಣ್ಯ ಇಲಾಖೆ ಬುಧವಾರ (ಆ.15) ಹಸಿರು ಕರ್ನಾಟಕ ಯೋಜನೆಗೆ ಚಾಲನೆ ನೀಡಲಿದೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಅರಣ್ಯ ಸಚಿವ ಆರ್‌.ಶಂಕರ್‌ ಸಸಿ ನೆಡುವ ಮತ್ತು ಸಸಿ ವಿತರಣೆ ಮೂಲಕ ಯೋಜನೆಗೆ ಚಾಲನೆ ನೀಡಲಿ ದ್ದಾರೆ. ಆ.15 ರಿಂದ 18ರವರೆಗೆ ರಾಜ್ಯಾದ್ಯಂತ ಹಸಿರು ಕರ್ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲು ಅರಣ್ಯ ಇಲಾಖೆ ಉದ್ದೇಶಿಸಿದೆ.

Advertisement

ಇದಕ್ಕಾಗಿ ಸರ್ಕಾರಿ ಮತ್ತು ಖಾಸಗಿ ಖಾಲಿ ಸ್ಥಳಗಳಲ್ಲಿ, ಎಲ್ಲ ಇಲಾಖೆಯ ಕಚೇರಿ, ಶಾಲಾ-ಕಾಲೇಜು ಆವರಣಗಳಲ್ಲಿ ಸಸಿಗಳನ್ನು ನಡಲಾಗುವುದು. ಈ ಕಾರ್ಯಕ್ರಮ ದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪರಿಸರ ಸಂಘಟನೆಗಳು, ಸ್ಥಳೀಯ ಸಂಘ-ಸಂಸ್ಥೆಗಳು, ಸ್ವಯಂ ಸೇವಕರು ಮತ್ತು
ಸಾರ್ವಜನಿಕರು ಕೈ ಜೋಡಿಸಬಹುದು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಮತ್ತು ಸ್ಥಳೀಯ ಗಣ್ಯ ವ್ಯಕ್ತಿಗಳು ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಬೇಕೆಂದು ಇಲಾಖೆ ಮನವಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next