Advertisement
ಈ ವಿಚಾರವಾಗಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ನ್ಯಾಯಮೂರ್ತಿ ಆಲೋಕ್ ಆರಾಧೆ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಗುತ್ತಿಗೆದಾರರಿಗೆ ಮಾ.8ರಂದು ನೀಡಿದ ಒಪ್ಪಿಗೆ ಪತ್ರ ಆಧರಿಸಿ ಗುತ್ತಿಗೆದಾರರು ಮಾ.11ರಂದು ಬ್ಯಾಂಕ್ ಖಾತರಿ ಒದಗಿಸಿದ್ದಾರೆ. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರರು ಪ್ರಾಥಮಿಕ ಹಂತದ ಕೆಲಸ ಆರಂಭಿಸಿದ್ದಾರೆ. ಬಹಳ ವರ್ಷಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯದ ಜೈವಿಕ ಗಣಿಗಾರಿಕೆ ಮತ್ತು ಜೈವಿಕ ಪರಿಹಾರಕ್ಕೆ ಮೂಲಸೌಕರ್ಯಗಳನ್ನು ಸೃಷ್ಟಿಸಿಕೊಳ್ಳುವುದು ಈ ಪ್ರಾಥಮಿಕ ಹಂತದ ಕಾಮಗಾರಿ ಒಳಗೊಂಡಿದೆ. ಇದರಲ್ಲಿ ಮುಖ್ಯವಾಗಿ ಸಿವಿಲ್ ನಿರ್ಮಾಣ ಕಾಮಗಾರಿ, ಯಂತ್ರೋಪಕರಣಗಳ ಪೂರೈಕೆ, ಎಂಐಎಸ್/ಐಟಿ, ವೇ ಬ್ರಿಜ್, ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ. ತರಬೇತಿ ಹಾಗೂ ಸಾಮರ್ಥಯ ವೃದ್ಧಿ, ಘಟಕ, ಯಂತ್ರೋಪಕರಣಗಳು, ಸಲಕರಣೆಗಳ ವಾರ್ಷಿಕ ನಿರ್ವಹಣೆ ಒಪ್ಪಂದ ಇತ್ಯಾದಿ ವಿಷಯಗಳನ್ನು ಒಳಗೊಂಡಿದೆ ಎಂದು ಪಾಲಿಕೆ ತಿಳಿಸಿದೆ.
Related Articles
Advertisement