Advertisement

ಘೋರ ದುರಂತ ಬಿಂಬಿಸುವ ಛಾಯಾಚಿತ್ರಕ್ಕೆ ಚಾಲನೆ

03:51 PM Aug 14, 2022 | Team Udayavani |

ರಾಯಚೂರು: ನಗರದ ಜಿಲ್ಲಾ ಬಸ್‌ ನಿಲ್ದಾಣದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಭಾರತ ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶ ಇಬ್ಭಾಗವಾದಾಗಿನ ಘೋರ ದುರಂತಗಳನ್ನು ಬಿಂಬಿಸುವ ಛಾಯಾಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಡಾ| ಕೆ.ಆರ್‌.ದುರುಗೇಶ್‌ ಚಾಲನೆ ನೀಡಿದರು.

Advertisement

ಈ ವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಜನಪದ ಹಾಗೂ ಮಾರ್ಚ್‌ ಆಫ್‌ ಕರ್ನಾಟಕ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿತರಿಸಲಾಯಿತು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ| ಸುರೇಂದ್ರ ಬಾಬು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿಲ್ದಾಣಾಧಿಕಾರಿ ಶೀಲಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿಯಾದ ಲಿಂಗರಾಜ್‌, ಎ.ಪ್ರಕಾಶ್‌, ರಮೇಶ ಗೌಡೂರು ಜಾಲಹಳ್ಳಿ, ಅಜರ್‌ ಉಲ್‌ ಹಕ್‌, ಚನ್ನಬಸವ, ದೇವೇಂದ್ರಮ್ಮ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next