Advertisement

Yellapura: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಬಸ್.‌ ಚಾಲಕ ಸ್ಥಳದಲ್ಲೇ ಸಾವು

04:03 PM Jan 03, 2024 | Team Udayavani |

ಯಲ್ಲಾಪುರ: ಖಾಸಗಿ ಬಸ್‌ ಅಪಘಾತಕ್ಕೊಳಗಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ರಾ.ಹೆದ್ದಾರಿ 63 ಅರಬೈಲ್‌ ಬಳಿ ಜ.3ರ ಬುಧವಾರ ಬೆಳಿಗ್ಗೆ  ನಡೆದಿದೆ.

Advertisement

ಆಂದ್ರಪ್ರದೇಶದ ನೆಲ್ಲೂರಿನ ಮಲ್ಲಿನಾ ಸ್ಥಳದಲ್ಲೇ ಮೃತಪಟ್ಟ ಚಾಲಕ.

ಹೈದಾರಾಬಾದ್‌ನಿಂದ ಗೋಕರ್ಣಕ್ಕೆ ಪ್ರವಾಸಕ್ಕೆಂದು ಆಗಮಸಿದ್ದ ಖಾಸಗಿ ಬಸ್‌ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್‌ ಗ್ರಾಮದ ಮಾರುತಿ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಸುಮಾರು 15ಕ್ಕೂ ಅಧಿಕ ಜನರಿಗೆ  ತೀವ್ರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಸ್ಥಳಾಂತರಿಸಲಾಗಿದೆ.

ಘಟನಾ ಸ್ಥಳಕ್ಕೆ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next