Advertisement

ಪಾಣೆಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ನಿಂತ ಗ್ಯಾಸ್ ಟ್ಯಾಂಕರ್

08:42 AM Nov 19, 2021 | Team Udayavani |

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಗ್ಯಾಸ್ ಟ್ಯಾಂಕರೊಂದು ರಸ್ತೆ ಬದಿಗೆ ಸರಿದು ಅಪಾಯಕಾರಿ ಸ್ಥಿತಿಯಲ್ಲಿ ನಿಂತ ಘಟನೆ ಪಾಣೆಮಂಗಳೂರು ಎಂಬಲ್ಲಿ ಶುಕ್ರವಾರ ನಡೆದಿದೆ.

Advertisement

ಪಾಣೆಮಂಗಳೂರು ಮಾರುತಿ ಸುಜುಕಿ ಶೋ ರೂಂ ಸಮೀಪ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬೆಂಗಳೂರು ಕಡೆಗೆ ಹೋಗುವ ವೇಳೆ ಮುಂಜಾನೆ ಸುಮಾರು 4 ಗಂಟೆಯ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ:ಕಾಲ್ನಡಿಗೆಯಲ್ಲಿ ಬ್ರಹ್ಮಾವರ ಟು ಜಮ್ಮು ಕಾಶ್ಮೀರ: 55 ದಿನಗಳಲ್ಲಿ ಜಮ್ಮು ತಲುಪಿದ ಯುವಕ

ಪಾಣೆಮಂಗಳೂರು ಎಂಬಲ್ಲಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವ ಸಂದರ್ಭದಲ್ಲಿ ನಿಯಂತ್ರಣ ಕಳೆದ ಲಾರಿ ರಸ್ತೆಯ ಪಕ್ಕ ಸರಿದು ಅಪಾಯಕಾರಿ ಸ್ಥಿತಿಯಲ್ಲಿ ನಿಂತಿತ್ತು.

Advertisement

ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬಳಿಕ ಕ್ರೇನ್ ಬಳಸಿ ಗ್ಯಾಸ್ ಟ್ಯಾಂಕರ್ ನ್ನು ಮೇಲಕ್ಕೆತ್ತಲಾಯಿತು.

ಬಂಟ್ವಾಳ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ., ಎ.ಎಸ್.ಐ. ವಿಜಯ್ ಹಾಗೂ ಟ್ರಾಫಿಕ್ ಪೋಲೀಸ್ ಸಿಬ್ಬಂದಿಗಳು ಟ್ರಾಫಿಕ್ ಗೆ ತೊಂದರೆಯಾಗದಂತೆ ಸ್ಥಳದಲ್ಲಿ ಕ್ರಮ ಕೈಗೊಂಡರು.

Advertisement

Udayavani is now on Telegram. Click here to join our channel and stay updated with the latest news.

Next