Advertisement

ಕೆಳ ಪರ್ಕಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಕಾರು

10:40 PM Apr 10, 2023 | Team Udayavani |

ಉಡುಪಿ: ಪರ್ಕಳ ರಾ.ಹೆ. ಬಳಿ ಕೆಳಪರ್ಕಳದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮುಂದೆ ಇರುವ ಹಳೆರಸ್ತೆಯ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದೆ.

Advertisement

ಕಾರು ಪರ್ಕಳದಿಂದ ಮಣಿಪಾಲದ ಕಡೆಗೆ ಬರುತ್ತಿತ್ತು. ಸ್ಥಳೀಯರ ಸಹಕಾರದಿಂದ ಕಾರಿನೊಳಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹೊರತೆಗೆಯಲಾಗಿದೆ. ಇವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅಪಾಯಕಾರಿ ತಿರುವು
ಈ ಭಾಗದಲ್ಲಿ ಈಗಾಗಲೇ ಹಲವಾರು ಅಪಘಾತಗಳು ಸಂಭವಿಸಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಈ ಭಾಗದಲ್ಲಿ ಎಚ್ಚರಿಕೆ ಫ‌ಲಕ ಅಳವಡಿಸುವುದರ ಜತೆಗೆ ಅಪಘಾತ ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next