Advertisement

ನೇರ ವೇತನಕ್ಕೆ ವಾಹನ ಚಾಲಕರ ಒತ್ತಾಯ

01:25 PM Sep 04, 2020 | Suhan S |

ಮೈಸೂರು: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ  ವಾಹನ ಚಾಲಕರನ್ನು ನೇರ ವೇತನಕ್ಕೆ ಒಳಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಹೊರಗುತ್ತಿಗೆ ವಾಹನ ಚಾಲಕರ ಸಂಘದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

Advertisement

ನಗರದ ಡೀಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ಮಂದಿ ಹೊರಗುತ್ತಿಗೆ ಆಧಾರದಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವ  ಹಿಸುತ್ತಿದ್ದಾರೆ. ಕೋವಿಡ್‌ ವಾರಿಯರ್ಸ್‌ಗಳಾಗಿ ದುಡಿಯುತ್ತಿರುವ ಚಾಲಕರಿಗೆ ಸಕಾಲಕ್ಕೆ ವೇತನ ಪಾವತಿ ಆಗುತ್ತಿಲ್ಲ. ಜೊತೆಗೆ ಸಣ್ಣಪುಟ್ಟ ಸಮಸ್ಯೆಗಳಿಗೂ ಚಾಲಕರನ್ನೇ ಹೊಣೆ ಮಾಡಿ ಕೆಲಸದಿಂದ ಹೊರ  ದೂಡುವ ಯತ್ನಗಳು ನಡೆಯುತ್ತಿವೆ. ಮೈಸೂರು ಜಿಲ್ಲೆಯಲ್ಲೂ ನೂರಕ್ಕೂ ಹೆಚ್ಚು ಹೊರಗುತ್ತಿಗೆ ವಾಹನ ಚಾಲಕರು ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಕಾಲಕ್ಕೆ ವೇತನವಿಲ್ಲದೆ ಸಂಕಷ್ಟ: ರಾಜ್ಯ ಸರ್ಕಾರ ಸೇವಾ ಭದ್ರತೆಗಾಗಿ ಹೊರಗುತ್ತಿಗೆ ವಾಹನ ಚಾಲಕರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರವೇತನಕ್ಕೆ ಒಳಪಡಿಸಬೆಕು. ಸಕಾಲಕ್ಕೆ ವೇತನ ಬಾರದ ಪರಿಣಾಮ ಚಾಲಕರು ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ತಮ್ಮ ವೈಯುಕ್ತಿಕ ಬದುಕನ್ನೂ ಲೆಕ್ಕಿಸದೆ ದುಡಿಯುತ್ತಿರುವ ಚಾಲಕರಿಗೆ ಸಕಾಲಕ್ಕೆ ವೇತನ ದೊರಕಿಸಬೇಕು. ಹಾಗೆಯೇ ಕೋವಿಡ್‌ ನಿಂದ ರಕ್ಷಣೆ ಪಡೆಯಲು ಸ್ಯಾನಿಟೈಸರ್‌ ಮೊದಲಾ ದವುಗಳನ್ನು ಪೂರೈಸಬೇಕು. ಜಿಲ್ಲೆಯಲ್ಲಿ ಹೊರಗು ತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ವಾಟರ್‌ಮನ್‌ಗಳನ್ನು ಸಹ ನೇರವೇತನಕ್ಕೆ ಒಳಪಡಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮೈಸೂರು ವಿಭಾಗೀಯ ಅಧ್ಯಕ್ಷ ಎಂ.ಬಿ.ನಾಗಣ್ಣ, ಮಾಜಿ ಮೇಯರ್‌ ನಾರಾಯಣ್‌ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next