Advertisement

ಚಾಲಕನ ಸಮಯ ಪ್ರಜ್ಞೆ; ತಪ್ಪಿದ ರೈಲು ಅವಘಡ

01:26 AM Oct 26, 2021 | Team Udayavani |

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ-ಮಂಗಳೂರು ರೈಲ್ವೇಯ ಸುಬ್ರಹ್ಮಣ್ಯ ಸಮೀಪ ಸೋಮವಾರ ಹಳಿ ಬಿರುಕು ಬಿಟ್ಟರೂ ರೈಲು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದೆ.

Advertisement

ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದಾಗ ಹಳಿ ಬಿರುಕು ಬಿಟ್ಟಿರುವುದು ರೈಲಿನ ಒಂದು ಬೋಗಿ ಚಲಿಸಿದ ಬಳಿಕ ಚಾಲಕನ ಗಮನಕ್ಕೆ ಬಂದಿದೆ.

ಕೂಡಲೇ ಸಮಯಪ್ರಜ್ಞೆ ಮೆರೆದ ಚಾಲಕ ರೈಲನ್ನು ನಿಯಂತ್ರಿಸಿ, ನಿಲುಗಡೆ ಮಾಡಿ ಘಟನೆಯನ್ನು ಇಲಾಖೆ ಗಮನಕ್ಕೆ ತಂದಿದ್ದಾರೆ. ಬಳಿಕ ಕಾರ್ಯಾಚರಣೆ ನಡೆಸಿ ಹಳಿ ದುರಸ್ತಿ ನಡೆಸಲಾಯಿತು. ಬಳಿಕ ರೈಲು ಸಂಚರಿಸಲು ಅವಕಾಶ ನೀಡಲಾಯಿತು.ಚಾಲಕನ ಸಮಯ ಪ್ರಜ್ಞೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next