Advertisement

ಚಾಲಕರು ಕಡ್ಡಾಯ ಮಾಸ್ಕ್ ಬಳಸಿ

03:22 PM Mar 20, 2020 | Suhan S |

ಕೆ.ಆರ್‌.ಪೇಟೆ: ದೇಶದ ಮೂಲೆ ಮೂಲೆಗಳಿಗೂ ವಾಹನ ಚಾಲನೆ ಮಾಡಿಕೊಂಡು ಹೋಗುವ ಚಾಲಕರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಆಧಿಕಾರಿ ನಿಂಗಪ್ಪ ಅಗಸರ ತಿಳಿಸಿದರು.

Advertisement

ತಾಲೂಕಿನ ಗಂಜೀಗೆರೆ ಗ್ರಾಮದಲ್ಲಿ ಕೆರೆ ಹೂಳೆತ್ತುವ ಜೆಸಿಬಿ ವಾಹನ ಚಾಲಕರಿಗೆ ಉಚಿತ ಮಾಸ್ಕ್ ವಿತರಿಸಿ ಮಾತನಾಡಿದ ಅವರು, ಚಾಲಕರು ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ವಾಹನ ಸಂಚಾರಕ್ಕೆ ಅನಿವಾರ್ಯವಾಗಿ ಹೋಗಲೇ ಬೇಕಿದೆ. ಹಾಗಾಗಿ ಅವರು ಕೋವಿಡ್ 19 ಸೋಂಕಿನಿಂದ ಪಾರಾಗಲು ಕಡ್ಡಾಯವಾಗಿ ಮಾಸ್ಕ್ ಮತ್ತಿತರೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಹೇಳಿದರು.

ಈಗ ಕೋವಿಡ್ 19 ವೈರಾಣು ಹರಡುತ್ತಿದೆ ಎಂಬ ಕಾರಣಕ್ಕೆ ಮಾಸ್ಕ್ ಹಾಕಿಕೊಳ್ಳುವ ಬದಲು ಸದಾಕಾಲ ಹಾಕಿಕೊಳ್ಳಬೇಕು. ಈಗ ಬೇಸಿಗೆ ಆರಂಭವಾಗಿದ್ದು, ದೂಳು ಹೆಚ್ಚಾಗಿ ನಮ್ಮ ದೇಹ ಸೇರುವುದರಿಂದ ಶ್ವಾಸಕೋಶಕ್ಕೆ ತೊಂದರೆಯಾಗುತ್ತದೆ. ಇರದ ಜೊತೆಗೆ ವಿವಿಧ ಭಾಗಗಳಲ್ಲಿ ಅಲ್ಲಿನ ಪರಿಸರಕ್ಕೆ ಅನುಗುಣವಾಗಿ ಸಾಂಕ್ರಾಮಿಕ ರೋಗಗಳು ಬರುತ್ತವೆ. ಅವುಗಳಿಂದ ರಕ್ಷಣೆ ಪಡೆದುಕೊಳ್ಳಲು ಮಾಸ್ಕ್ಗಳು ಸಹಕಾರಿಯಾಗುತ್ತವೆ. ಆದ್ದರಿಂದ ಚಾಲಕರು ತಾವು ಕರ್ತವ್ಯ ನಿರ್ವಹಿಸುವಾಗ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಚಾಲನೆ ಮಾಡಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next