Advertisement

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

03:35 PM Sep 21, 2024 | keerthan |

ಶಿವಮೊಗ್ಗ: ಪಾನಮತ್ತನಾಗಿ ಚಾಲಕ ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಲಾರಿಗೆ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ರಿಪ್ಪನ್‌ ಪೇಟೆಯಲ್ಲಿ ಶುಕ್ರವಾರ ರಾತ್ರಿ (ಸೆ.20) ನಡೆದಿದೆ.

Advertisement

ನಗುಮಗು ಆ್ಯಂಬ್ಯುಲೆನ್ಸ್‌ ಚಾಲಕನ ನಿರ್ಲಕ್ಷ್ಯ ತೋರಿದ್ದು, ಅದೃಷ್ಟವಶಾತ್ ತಾಯಿ ಮಗು ಸ್ವಲ್ಪದರಲ್ಲೇ ಬಚಾವಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವನ್ನು ಹೊಸನಗರದ ಸರ್ಕಾರಿ ಆಸ್ಪತ್ರೆಯಿಂದ ನಗುಮಗು ಆ್ಯಂಬ್ಯುಲೆನ್ಸ್‌ ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಘಟನೆ ನಡದಿದೆ. ರಿಪ್ಪನ್‌ ಪೇಟೆ ಸಮೀಪದ ದೂನ ಗ್ರಾಮದ ಬಳಿ ಅಪಘಾತ ನಡೆದಿದೆ. ಅಪಘಾತದಲ್ಲಿ ಬಾಣಂತಿ ಮತ್ತು ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ.

ಘಟನೆ ನಂತರ ಮತ್ತೊಂದು ಆ್ಯಂಬ್ಯುಲೆನ್ಸ್‌ ಸ್ಥಳಕ್ಕೆ ಬಂದಿದೆ. ಅದರಲ್ಲಿ ತೆರಳುವಂತೆ ಸ್ಥಳೀಯರು ಸೂಚಿಸಿದ್ದಾರೆ. ಆದರೆ ಆ್ಯಂಬ್ಯುಲೆನ್ಸ್‌ ಸಹವಾಸವೇ ಬೇಡ ಎಂದು ಗಾಯಾಳುಗಳು ಕಾರಿನಲ್ಲಿ ತೆರಳಿದ್ದಾರೆ.

Advertisement

ನಗುಮಗು ಆ್ಯಂಬ್ಯುಲೆನ್ಸ್‌ ಚಾಲಕನ ನಿರ್ಲಕ್ಷ್ಯದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಸ್ಥಳಕ್ಕೆ ಹೊಸನಗರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next