Advertisement

ಬರ ಕಾಮಗಾರಿ: ಕೆಟಿಟಿಪಿ ಕಾಯ್ದೆಯಿಂದ ವಿನಾಯಿತಿ

10:57 PM Aug 02, 2019 | Lakshmi GovindaRaj |

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಕುಡಿಯುವ ನೀರು ಪೂರೈಕೆ ಸೇರಿ ತುರ್ತು ಕಾಮಗಾರಿಗಳನ್ನು ಕೈಗೊಳ್ಳುವ ಸಂಬಂಧ ಟೆಂಡರ್‌ ಪ್ರಕ್ರಿಯೆಗೆ ಕೆಟಿಟಿಪಿ ಕಾಯ್ದೆಯಿಂದ ನೀಡಲಾಗಿದ್ದ ವಿನಾಯಿತಿ ಅವಧಿ ಸೆಪ್ಟೆಂಬರ್‌ 30ರವರೆಗೂ ವಿಸ್ತರಿಸಲಾಗಿದೆ. ಈ ಹಿಂದೆ ಜುಲೈ 31ರವರೆಗೆ ಘೋಷಿಸಿದ್ದ ತುರ್ತು ಪರಿಸ್ಥಿತಿ ಅವಧಿ ಇದೀಗ ಎರಡು ತಿಂಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

Advertisement

ಕುಡಿಯುವ ನೀರು ಸರಬರಾಜು ಹಾಗೂ ಬರ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟೆಂಡರ್‌ ಕರೆಯಲು ಕೆಟಿಟಿಪಿ ಕಾಯ್ದೆ ಅನ್ವಯವಾಗದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದರೆ, ಸಂಬಂಧಪಟ್ಟ ಜಿಲ್ಲಾಧಿಕಾರಿಗಳು/ನಗರ ಸ್ಥಳೀಯ ಸಂಸ್ಥೆಗಳು ಬರ ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನಗಳಡಿ ಕೈಗೊಳ್ಳುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next