Advertisement
ಇದಕ್ಕೆ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವರು ಉತ್ತರ ನೀಡಿದ್ದು, 13ನೇ ಹಣಕಾಸು ಆಯೋಗದ ಪ್ರಕಾರ 889 ಕೋಟಿ ರೂ. ನೀಡಲಾಗುತ್ತಿತ್ತು. 14ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕಕ್ಕೆ 1527 ಕೋಟಿ ರೂ. ನೀಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ನಿಯಮದ ಪ್ರಕಾರ ವಾರ್ಷಿಕ ಕಡಿಮೆ ಪರಿಹಾರ ನೀಡಿದ್ದು, ರಾಜ್ಯ ಸರ್ಕಾರವೂ ಸ್ವಂತ ಖಜಾನೆಯಿಂದ ಹಣ ಬಿಡುಗಡೆ ಮಾಡಿ ಪರಿಹಾರ ಕ್ರಮ ಕೈಗೊಂಡಿದೆ. ಪ್ರತಿ ವರ್ಷ ಬರ ಪರಿಹಾರಕ್ಕೆ ಸರಾಸರಿ 1259 ಕೋಟಿ ರೂ.ವೆಚ್ಚ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕ ದಿಂದ 1990 ರಿಂದ 2005 ರ ವರೆಗೆ ಒಟ್ಟು
ಹಣದಲ್ಲಿ ಶೇ.3.2 ರಷ್ಟು ಕರ್ನಾಟಕಕ್ಕೆ ನೀಡಲಾಗುತ್ತಿತ್ತು. ಆದರೆ, 2015-20 ರವರೆಗೆ ಶೇ.2.4ರಷ್ಟು ಮಾತ್ರ ಕರ್ನಾಟಕಕ್ಕೆ ಮೀಸಲಿಡಲಾಗಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.