Advertisement

Drug peddler: ಪ್ರತ್ಯೇಕ ಪ್ರಕರಣ: 8 ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳ ಸೆರೆ

04:03 PM Sep 05, 2023 | Team Udayavani |

ಬೆಂಗಳೂರು:  ಮೂರು ಪ್ರತ್ಯೇಕ ಮಾದಕ ವಸ್ತು ಮಾರಾಟ ಪ್ರಕರಣಗಳ ಕಾರ್ಯಾಚರಣೆಯಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಹಾಗೂ ಸ್ಥಳೀಯ ಪೊಲೀಸರು ಆರು ಅಂತಾರಾಜ್ಯ ಪೆಡ್ಲರ್‌ಗಳು ಸೇರಿ ಎಂಟು ಮಂದಿ ಬಂಧಿಸಿದ್ದಾರೆ.

Advertisement

ಆನ್‌ಲೈನ್‌ನ ಮೂಲಕ ಹಣಕಾಸು ವ್ಯವಹಾರ ನಡೆಸಿ, ಲೊಕೇಷನ್‌ ಕಳುಹಿಸಿ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ರಾಜಸ್ಥಾನ ಮೂಲದ ಮೂವರು ಸೇರಿ ನಾಲ್ವರು ಕೊಡಿಗೇಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಜಸ್ಥಾನದ ನೇಮಿಚಂದ್‌ (40), ಓಂಪ್ರಕಾಶ್‌ (35), ಪ್ರೇಮರಾಜ್‌(40) ಮತ್ತು ಬೆಂಗಳೂರಿನ ಥಣಿಸಂದ್ರ ನಿವಾಸಿ ಮಲ್ಲೇಶ್‌(35) ಬಂಧಿತರು. ಆರೋಪಿಗಳಿಂದ ಮೂರು ಲಕ್ಷ ರೂ. ಮೌಲ್ಯದ 61 ಗ್ರಾಂ ತೂಕದ ಹೆರಾಯಿನ್‌, ಮೂರು ಮೊಬೈಲ್‌, ಒಂದು ಕಾರು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಇತ್ತೀಚೆಗೆ ಆರೋಪಿಗಳು ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು, ಐಟಿ ಕಂಪನಿಯ ಉದ್ಯೋಗಿಗಳಿಗೆ ಪೂರೈಕೆ ಮಾಡು ತ್ತಿದ್ದರು. ಈ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿ  ಸ ಲಾಗಿದೆ. ಕೆಲ ವರ್ಷಗಳ ಹಿಂದೆಯೇ ಬೆಂಗ ಳೂರಿಗೆ ಬಂದಿದ್ದ ರಾಜಸ್ಥಾನ ಮೂಲದ ಆರೋಪಿ ಗಳು ನಗರದಲ್ಲಿ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದರು. ಇನ್ನು ಮಲ್ಲೇಶ್‌ ಕೂಡ ಆರೋಪಿಗಳಿಗೆ ಪರಿಚಯಸ್ಥನಾಗಿದ್ದ. ಹೀಗಾಗಿ ರಾಜಸ್ಥಾನದಲ್ಲಿ ಕೆಲ ವ್ಯಕ್ತಿಗಳನ್ನು ಪರಿಚಯಿಸಿಕೊಂಡು ಅಲ್ಲಿಂದಲೇ ಮಾದಕ ವಸ್ತುಗಳನ್ನು ನಗರಕ್ಕೆ ತರಿಸುತ್ತಿದ್ದರು. ತಮಗೆ ಕರೆ ಮಾಡುತ್ತಿದ್ದ ನಿರ್ದಿಷ್ಟ ಗ್ರಾಹಕರಿಂದ ಆನ್‌ಲೈನ್‌ ಮೂಲಕ ಹಣ ಪಡೆದುಕೊಂಡು, ನಿರ್ಜನ ಪ್ರದೇಶದಲ್ಲಿ ಮಾದಕ ವಸ್ತುವಿನ ಪೊಟ್ಟಣ ಇರಿಸಿ, ಲೋಕೇಷನ್‌ ಕಳುಹಿಸುತ್ತಿದ್ದರು. ಬಳಿಕ ಗ್ರಾಹಕ ಆ ಲೋಕೇಷನ್‌ಗೆ ಬಂದು ಪೊಟ್ಟಣ ತೆಗೆದುಕೊಂಡು ಹೋಗುತ್ತಿದ್ದ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಯಲಹಂಕ ಉಪವಿಭಾಗದ ಎಸಿಪಿ ಆರ್‌.ಮಂಜುನಾಥ್‌, ಠಾಣಾಧಿಕಾರಿ ಎಂ.ಎ.ಮಹೇಶ್‌, ಪಿಎಸ್‌ಐ ಲಕ್ಷ್ಮೀಕಾಂತ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂವರು ಒಡಿಶಾದವರ ಬಂಧನ: ಒಡಿಶಾದಿಂದ ಮಾದಕ ವಸ್ತು ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಮೂವರನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಸುಧೀರ್‌ ರಾಣಾ(32), ಸಂತೋಷ್‌ ರಾಣಾ(28) ಮತ್ತು ಕ್ಯಾಬನ್‌ ಬಾಗ್‌(38) ಬಂಧಿತರು. ಆರೋಪಿಗಳಿಂದ 11 ಲಕ್ಷ ರೂ. ಮೌಲ್ಯದ 21.14 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

ಇತ್ತೀಚೆಗೆ ಒಡಿಶಾದಿಂದ ಭಾರೀ ಪ್ರಮಾಣದಲ್ಲಿ ಮಾದಕ ವಸ್ತು ತಂದು ನಗರದಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಠಾಣಾಧಿಕಾರಿ ಬಿ.ಗೋವಿಂದರಾಜು, ಪಿಎಸ್‌ಐ ಡಿ.ಕೆ.ಶ್ರೀಶೈಲಾ, ಎಂ.ಎಲ್‌.ಸುಷ್ಮಾ, ಕೆ.ಸಿ.ಹೇಮಂತ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಯಲಹಂಕ ನ್ಯೂಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಟ್‌-ಎನ್‌ಡಿಪಿಎಸ್‌ ಅಡಿ ಬಂಧನ:

ಪದೇಪದೆ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಭಾಗಿಯಾಗುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಪಿಟ್‌ – ಎನ್‌ಡಿಪಿಎಸ್‌ ಕಾಯ್ದೆ ಅಡಿ ಬಂಧಿಸಿದ್ದಾರೆ. ಬಿಹಾರ ಮೂಲದ ಅಖೀಲೇಶ್‌ ಕುಮಾರ್‌(30) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ನಿರಂತರವಾಗಿ ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗುತ್ತಿದ್ದ. ಇತ್ತೀಚೆಗೆ ಡ್ರಗ್ಸ್‌ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ. ಜಾಮೀನು ಪಡೆದು ಬಿಡುಗಡೆ ಬಳಿಕ ಕೋರ್ಟ್‌ನ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಅಲ್ಲದೆ, ತನ್ನ ಸಹಚರರ ಮೂಲಕ ಡ್ರಗ್ಸ್‌ ದಂಧೆ ನಡೆಸುತ್ತಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next