Advertisement

Police: ಮಾದಕ ದ್ರವ್ಯ ಸೇವನೆ: ಇಬ್ಬರ ಸೆರೆ

11:43 PM Sep 03, 2023 | Team Udayavani |

ಉಪ್ಪಿನಂಗಡಿ: ಇಲ್ಲಿನ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ರಿಫಾಯಿನಗರ ಎಂಬಲ್ಲಿ ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸು ತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ.

Advertisement

ಬಂಟ್ವಾಳ ತಾಲೂಕು ಬುಡೋಳಿ ಗ್ರಾಮದ ಸಹ್ಯಾಝ್ ಅಹಮ್ಮದ್‌ (23) ಹಾಗೂ ಬಿಳಿಯೂರು ಗ್ರಾಮ ನಿವಾಸಿಯಾದ ಸಲೀಂ ಹುಸೈನ್‌ (40) ಗಾಂಜಾ ಸೇವಿಸಿ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾಗ ಪೊಲೀಸರು ಅವರಿಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next