Advertisement

ಅರ್ಧ ಕೆ.ಜಿ. ಗಾಂಜಾ ವಶ ಆರೋಪಿ ಬಂಧನ

09:40 AM Nov 30, 2021 | Team Udayavani |

ಹುಣಸೂರು: ಉಪ ವಿಭಾಗದ ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ 500 ಗ್ರಾಂ. ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪಿಸಿದ್ದಾರೆ.

Advertisement

ಹುಣಸೂರು ಉಪ ವಿಭಾಗ ವ್ಯಾಪ್ತಿಯ ಪಿರಿಯಾಪಟ್ಟಣ ತಾಲೂಕು ಕಂಪಲಾಪುರದ ಕೆಂಪಣ್ಣ ಬಂಧಿತ ಆರೋಪಿ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಡಿವೈಎಸ್‌ಪಿ ಶ್ರೀನಿವಾಸ್ ನೇತೃತ್ವದ ತಂಡವು ಗಸ್ತಿನಲ್ಲಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಕಂಪಲಾಪುರದ ಬೆಕ್ಯಾ ಗ್ರಾಮದ ಸರ್ಕಲ್‌ನಲ್ಲಿ ನಿಂತಿದ್ದ ಕೆಂಪಣ್ಣರ ಮೇಲೆ ದಾಳಿ ನಡೆಸಿ ಮಾಲು ಸಹಿತ ಆರೋಪಿಯನ್ನು ಬಂಧಿಸಲಾಗಿದೆ.

ಅಬಕಾರಿ ಉಪ ಆಯುಕ್ತೆ ಮಹದೇವಿಬಾಯಿರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಶ್ರೀನಿವಾಸ್ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕಿ ಸುಧಾರಾಣಿ, ಅಜಯ್, ಕುಮಾರ, ಬೇಗ್, ಚಾಲಕಿ ಧರ್ಮಾವತಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next