Advertisement

ಮಾದಕ ವಸ್ತುಗಳಿಂದ ದೂರವಿರಿ

03:01 PM Sep 20, 2020 | Suhan S |

ಕನಕಪುರ: ಭವ್ಯ ಭಾರತವನ್ನು ಮುನ್ನಡಸಬೇಕಾದ ಯುವಕರು ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಎಂದು ಬಿಜೆಪಿ ತಾಲೂಕು ಯುವ ಮೋರ್ಚ ಅಧ್ಯಕ್ಷ ಸುನೀಲ್‌ ಬೇಸರ ವ್ಯಕ್ತಪಡಿಸಿದರು.

Advertisement

ನಗರದ ತಾಲೂಕು ಕಚೇರಿ ಆವರಣದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಡ್ರಗ್ಸ್‌ಮುಕ್ತ ಕರ್ನಾಟಕ ಅಭಿಯಾನ ಸಹಿ ಸಂಗ್ರಹಕ್ಕೆ ಚಾಲನೆ ನೀಡಿ  ಮಾತನಾಡಿದ ಅವರು, ಯುವ ಪೀಳಿಗೆ ಮಾದಕ ವಸ್ತುಗಳಿಂದ ದೂರವಿರಬೇಕು ಕಿವಿ ಮಾತು ಹೇಳಿದರು.

ಹಣದ ಆಸೆಗಾಗಿ ಕೆಲವರುಮಾದಕ ವಸ್ತುಗಳ ಧಂದೆ ನಡೆಸುತ್ತಿದ್ದಾರೆ. ಇದರಿಂದಸಮಾಜದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ.  ಅಲ್ಲದೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಇದರ ನಿರ್ಮೂಲನೆಗೆ ಕೈಜೋಡಿಸಬೇಕು ಆಗ ಮಾತ್ರ ಉತ್ತಮವಾದ ಸಮಾಜ ನಿರ್ಮಿಸಲು ಸಾಧ್ಯ.ಯುವಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಅಭಿಯಾನ ಆರಂಭಿಸಿದ್ದೇವೆ ಎಂದರು. ಈ ವೇಳೆ ಬಿಜೆಪಿ ಯುವ ಮೋರ್ಚದ ತಾಲೂಕು ಪ್ರಧಾನ ಕಾರ್ಯದರ್ಶಿಪ್ರದೀಪ್‌,ರಮೆಶ್‌,ಮುನಿಸಿದ್ದೇಗೌಡ, ಶಿವರಾಮು, ಮುಖಂಡರಾದ ರಮೆಶ್‌, ಭರತ್‌, ಶಿವಶಂಕರ್‌ ಉಪಸ್ಥಿರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next