Advertisement
ಕುಳಾಯಿಯ ಬೀಟ್ ಸದಸ್ಯ ಯೋಗೀಶ್ ಸನಿಲ್ ಕುಳಾಯಿ ಮಾತನಾಡಿ, ಹೆದ್ದಾರಿ ಸಹಿತ ವಿವಿಧೆಡೆ ಹಾಕಲಾದ ಸಿಸಿಟಿವಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಇಡ್ಯಾದ ಗಿರಿಯಪ್ಪ ಮಾತನಾಡಿ, ದನ ಕಳವು ಪ್ರಕರಣಗಳನ್ನು ತಡೆಯಲು ಸಮರ್ಪಕ ಕ್ರಮ ಕೈಗೊಳ್ಳಬೇಕು. ಪೊಲೀಸರು ಆರೋಪಿಗಳನ್ನು ಹಿಡಿದರೂ ಶಿಕ್ಷೆಯಾಗುವುದು ಅಪರೂಪ. ಇದಕ್ಕೆ ಪರ್ಯಾಯ ಕ್ರಮ ಸಾಧ್ಯವೆ ಎಂದು ಪ್ರಶ್ನಿಸಿದರು.
Related Articles
Advertisement
ಪುಷ್ಪರಾಜ್ ಕುಡುಂಬೂರು ಅವರು ಬೈಕುಗಳಲ್ಲಿ ಮೂರು ಜನ ಹೆಲ್ಮೆಟ್ ಇಲ್ಲದೆ ಓಡಾಟ, ಒಳ ರಸ್ತೆಗಳಲ್ಲಿ ಓವರ್ಸ್ಪೀಡ್ ಸಂಚಾರ ಮತ್ತಿತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಗಮನಸೆಳೆದರು.
ದುರಸ್ತಿಗೆ ಕ್ರಮಅಧ್ಯಕ್ಷತೆ ವಹಿಸಿ ಮಾತನಾಡಿದ ಪಣಂಬೂರು ಪೊಲೀಸ್ ಉಪವಿಭಾಗದ ಸಹಾಯಕ ಆಯುಕ್ತ ಶ್ರೀನಿವಾಸ ಗೌಡ ಅವರು, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊ ಳ್ಳಲಾಗಿದೆ ಈಗಾಗಲೇ ಸಿಸಿಟಿವಿ ಉಪಕರಣ ಗಳು ಬಂದಿವೆ. ಸಿಸಿಟಿವಿಗಳು ಹಾಳಾದ ಕಡೆ ದುರಸ್ತಿಗೆ ಕ್ರಮಕೊಳ್ಳಲಾಗಿದೆ ಎಂದರು. ದನ ಕಳವು ಸಂಬಂಧಪಟ್ಟಂತೆ ರೈತರು ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳ ಬಾರದು. ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಲಾಗುವುದು. ಪಣಂಬೂರು ಠಾಣಾ ವ್ಯಾಪ್ತಿಯ ಗೆಸ್ಟ್ ಹೌಸ್, ಹೋಂಸ್ಟೇ ಮೇಲೆ ನಿಗಾ ಇಡಲಾಗಿದೆ. ಯಾವುದೇ ಅತಿರೇಕದ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ ಎಂದರು. ಪೋಲಿಸರ ಮೇಲೆ ಹಲ್ಲೆಗಳು ನಡೆಯುತ್ತಿರುವುದು ವಿಷಾದನೀಯ. ಆದರೆ ಅಪರಾಧ ಮಾಡಿದವರ ಮೇಲೆ ನಾವು ಕಠಿನ ಕಾನೂನು ಕೈಗೊಳ್ಳದೆ ಬಿಡುವುದಿಲ್ಲ . ಕೆಲವು ಬಾರಿ ಪೊಲೀಸರು ನಿಷ್ಠೆಯಿಂದ ನಮ್ಮ ಕರ್ತವ್ಯ ಮಾಡಿದರೂ ತಪ್ಪು ಸಂದೇಶ ರವಾನೆಯಾಗಿ ಆರೋಪಿಯನ್ನು ವೈಭವೀಕರಿಸಲಾಗುತ್ತದೆ ಎಂದು ಸಹಾಯಕ ಆಯುಕ್ತ ಶ್ರೀನಿವಾಸ ಗೌಡ ಬೇಸರ ವ್ಯಕ್ತಪಡಿಸಿದರು. ಪೊಲೀಸ್ ಠಾಣೆಯಲ್ಲಿ ಪೊಲೀಸರ ದುರ್ನಡತೆ ಕಂಡುಬಂದರೆ ಅದಕ್ಕೆ ನಾನು ಕ್ಷಮೆಯಾಚಿಸುತ್ತೇನೆ, ಮುಂದೆ ಈ ರೀತಿ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುವುದು. ಅಪರಾಧ ಚಟುವಟಿಕೆಗಳನ್ನು ಮಟ್ಟಹಾಕಲು ಪೊಲೀಸರೊಂದಿಗೆ ಸಹಕರಿಸಿ ಎಂದರು. ಅಪರಾಧಿಗಳ ವಿರುದ್ಧ ಕಠಿನ ಕ್ರಮ
ಪೋಲಿಸರ ಮೇಲೆ ಹಲ್ಲೆಗಳು ನಡೆಯುತ್ತಿರುವುದು ವಿಷಾದನೀಯ. ಆದರೆ ಅಪರಾಧ ಮಾಡಿದವರ ಮೇಲೆ ನಾವು ಕಠಿನ ಕಾನೂನು ಕೈಗೊಳ್ಳದೆ ಬಿಡುವುದಿಲ್ಲ . ಕೆಲವು ಬಾರಿ ಪೊಲೀಸರು ನಿಷ್ಠೆಯಿಂದ ನಮ್ಮ ಕರ್ತವ್ಯ ಮಾಡಿದರೂ ತಪ್ಪು ಸಂದೇಶ ರವಾನೆಯಾಗಿ ಆರೋಪಿಯನ್ನು ವೈಭವೀಕರಿಸಲಾಗುತ್ತದೆ ಎಂದು ಸಹಾಯಕ ಆಯುಕ್ತ ಶ್ರೀನಿವಾಸ ಗೌಡ ಬೇಸರ ವ್ಯಕ್ತಪಡಿಸಿದರು. ಪೊಲೀಸ್ ಠಾಣೆಯಲ್ಲಿ ಪೊಲೀಸರ ದುರ್ನಡತೆ ಕಂಡುಬಂದರೆ ಅದಕ್ಕೆ ನಾನು ಕ್ಷಮೆಯಾಚಿಸುತ್ತೇನೆ, ಮುಂದೆ ಈ ರೀತಿ ಘಟನೆಗಳು ನಡೆಯದಂತೆ ನೋಡಿಕೊಳ್ಳಲಾಗುವುದು. ಅಪರಾಧ ಚಟುವಟಿಕೆಗಳನ್ನು ಮಟ್ಟಹಾಕಲು ಪೊಲೀಸರೊಂದಿಗೆ ಸಹಕರಿಸಿ ಎಂದರು.