Advertisement

ಕುಡಿದ ಮತ್ತಿನಲ್ಲಿ ತನಗೆ ಕಚ್ಚಿದ ಹಾವನ್ನೇ ಕಚ್ಚಿ ಮೂರು ತುಂಡು ಮಾಡಿ ಎಸೆದ!

08:34 AM Jul 30, 2019 | Nagendra Trasi |

ಉತ್ತರಪ್ರದೇಶ:ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ್ದು, ಈ ವೇಳೆ ಆಕ್ರೊಶಗೊಂಡ ಆತ ಹಾವನ್ನೇ ಕಚ್ಚಿ ಮೂರು ತುಂಡು ಮಾಡಿದ ಘಟನೆ ಉತ್ತರಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ.

Advertisement

ಹಾವಿನ ಕಡಿತಕ್ಕೊಳಗಾದ ವ್ಯಕ್ತಿಯನ್ನು ರಾಜ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆತನ ಆರೋಗ್ಯ ತುಂಬಾ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಹಾವು ಮನೆಯೊಳಗೆ ಬಂದಿದ್ದು, ಈ ವೇಳೆ ಹಾವು ನನ್ನ ಮಗನಿಗೆ ಕಚ್ಚಿತ್ತು. ಕುಡಿದ ಅಮಲಿನಲ್ಲಿದ್ದ ಮಗ ಹಾವನ್ನೇ ಕಚ್ಚಿ ತುಂಡು ಮಾಡಿರುವುದಾಗಿ ತಂದೆ ವಿವರಿಸಿದ್ದಾರೆ. ಆತನ ಸ್ಥಿತಿ ಚಿಂತಾಜನಕವಾಗಿದೆ. ಮಗನಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸುವಷ್ಟು ಶಕ್ತಿಯೂ ನಮ್ಮಲ್ಲಿ ಇಲ್ಲ ಎಂದು ರಾಜ್ ಕುಮಾರ್ ತಂದೆ ಬಾಬು ರಾಮ್ ಎಎನ್ ಐಗೆ ತಿಳಿಸಿದ್ದಾರೆ.

ರಾಜ್ ಕುಮಾರ್ ಸ್ಥಿತಿ ಚಿಂತಾಜನಕವಾಗಿರುವ ಹಿನ್ನೆಲೆಯಲ್ಲಿ ಆತನನ್ನು ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next