Advertisement

ಮದ್ಯ ಸೇವಿಸಿದ್ದ ಶಾಲಾ ವಾಹನ ಚಾಲಕ ಸೆರೆ

12:06 PM Aug 04, 2018 | Team Udayavani |

ಬೆಂಗಳೂರು: ಚಾಲಕ ಮದ್ಯಪಾನ ಮಾಡಿ ಚಾಲನೆ ಮಾಡುತ್ತಿದ್ದ ಶಾಲಾ ವಾಹನ ಯಲಹಂಕ ಬಳಿ ಶುಕ್ರವಾರ ಬೆಳಗ್ಗೆ ಬಿಎಂಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ವಾಹನದಲ್ಲಿ ಮಕ್ಕಳಿಲ್ಲದ ಕಾರಣ ಪ್ರಾಣಾಪಾಯ ಸಂಭವಿಸಿಲ್ಲ.

Advertisement

ಯಲಹಂಕದ ದೊಡ್ಡಬಳ್ಳಾಪುರ ರಸ್ತೆಯ ಶೇಷಾದ್ರಿಪುರಂ ಕಾಲೇಜು ಬಳಿ ಘಟನೆ ನಡೆದಿದ್ದು, ಈ ಸಂಬಂಧ ಯಲಹಂಕ ನಿವಾಸಿ, ಶಾಲಾ ವಾಹನ ಚಾಲಕ ಮಂಜುನಾಥ್‌ (35) ಎಂಬಾತನನ್ನು ಬಂಧಿಸಲಾಗಿದೆ. ಇಲ್ಲಿನ ಪ್ರಸಿಡೆನ್ಸಿ ಶಾಲೆಯ ವಾಹನ ಚಾಲಕ ಮಂಜುನಾಥ್‌, ಪ್ರತಿ ದಿನ ಆರ್‌.ಟಿ.ನಗರದಿಂದ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ.

ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಮದ್ಯಪಾನ ಮಾಡಿ ಯಲಹಂಕದಿಂದ ಆರ್‌.ಟಿ.ನಗರಕ್ಕೆ ಹೋಗುವಾಗ ಶಾಲಾ ವಾಹನ ಎದುರು ಬರುತ್ತಿದ್ದ ಬಿಎಂಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶಾಲಾ ವಾಹನದ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಯಲಹಂಕ ಸಂಚಾರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮದ್ಯ ಸೇವಿಸಿರುವುದು ಬೆಳಕಿಗೆ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next