Advertisement

ಮೈತ್ರಿ ವಿಚಾರದಲ್ಲಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ

02:14 PM Sep 25, 2023 | Team Udayavani |

ರಾಯಚೂರು: ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಅಭ್ಯರ್ಥಿ ಕಣಕ್ಕಿಳಿಸಿ ಗೆಲುವಿಗಾಗಿ ಶ್ರಮಿಸಲಾಗುವುದು. ಬಿಜೆಪಿ ಜತೆಗಿನ ಮೈತ್ರಿ ವಿಚಾರದಲ್ಲಿ ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧ ಎಂದು ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇಲ್ಲಿ ಬಿಜೆಪಿ ಯಾರಿಗೆ ಟಿಕೆಟ್ ನೀಡುತ್ತದೆಯೋ ನಮಗೆ ಗೊತ್ತಿಲ್ಲ. ಆದರೆ, ಜಿಲ್ಲೆಯಲ್ಲಿ ಜೆಡಿಎಸ್ ಕೂಡ ಬಲಿಷ್ಠವಾಗಿದ್ದು, ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲಿಸಲು ಶ್ರಮಿಸಲಾಗುವುದು ಎಂದರು.

ಬಿಜೆಪಿ ಮೈತ್ರಿ ಬಗ್ಗೆ ನಾನು ಬೇಸರ ವ್ಯಕ್ತಪಡಿಸಿಲ್ಲ. ಆದರೆ, ನನ್ನ ಕ್ಷೇತ್ರದಲ್ಲಿನ ವಿಚಾರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದ್ದೆ. ನನಗೆ ಪಕ್ಷ ಎಷ್ಟು ಮುಖ್ಯವೋ ಕ್ಷೇತ್ರದ ಮತದಾರರು ಕೂಡ ಅಷ್ಟೇ ಮುಖ್ಯ. ಪಕ್ಷದ ಕಾರ್ಯಕರ್ತರು ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಸೆಣಸಾಡಿ ಗೆಲುವು ಸಾಧಿಸಿದ್ದು, ಕ್ಷೇತ್ರದ ಮತದಾರರು ಜೆಡಿಎಸ್ ಮನ್ನಣೆ ನೀಡಿದ್ದಾರೆ. ಪಕ್ಷದ ವರಿಷ್ಠರು ಮೈತ್ರಿ ವಿಚಾರವಾಗಿ ನಮಗೆ ಇನ್ನೂ ಯಾವುದೇ ರೀತಿಯ ಸೂಚನೆಗಳನ್ನು ಇನ್ನೂ ನೀಡಿಲ್ಲ. ವರಿಷ್ಠರ ನಿರ್ಧಾರಗಳಿಗೆ ಬದ್ಧರಾಗಿ ಕೆಲಸ ಮಾಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next