Advertisement

ಈಶ್ವರಪ್ಪ ದೂರು ಹಿನ್ನೆಲೆ : ಯಡಿಯೂರಪ್ಪರ ರಾಜಿನಾಮೆಗೆ ಒತ್ತಾಯಿಸಿದ ಡಿಕೆಶಿ

07:43 PM Mar 31, 2021 | Team Udayavani |

ಬೆಂಗಳೂರು : ಸಚಿವ ಈಶ್ವರಪ್ಪ ಸಿಎಂ ಯಡಿಯೂರಪ್ಪ ವಿರುದ್ಧ ವರಿಷ್ಠರಿಗೆ ದೂರು ನೀಡಿದ್ದು, ಮುಖ್ಯಮಂತ್ರಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲವೇ ಅವರ ಮೇಲಿನ ಆರೋಪ ಸುಳ್ಳಾಗಿದ್ದರೆ ಸಚಿವರನ್ನು ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

Advertisement

ಯಡಿಯೂರಪ್ಪ ಅವರು ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ದೆಹಲಿಯ ವರಿಷ್ಠರಿಗೆ ದೂರು ನೀಡಿದ್ದರು.

ಕಳೆದ ಒಂದುವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವನಾಗಿ ಕೆಲಸ ಮಾಡುತ್ತಿರುವ ತಮ್ಮ ಗಮನಕ್ಕೆ ಬಾರದಂತೆ ಸಿಎಂ ಯಡಿಯೂರಪ್ಪ ಇಲಾಖೆಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದ ಹಿರಿಯ ಸಚಿವನಾಗಿರುವ ತಮಗೆ ಇದರಿಂದ ನೋವಾಗಿದೆ ಎಂದು ಆರೋಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next